
ನವದೆಹಲಿ: ಇತ್ತೀಚೆಗೆ ಸಂಸತ್ ಕಲಾಪದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡಿದ್ದಕ್ಕೆ ಸ್ವಪಕ್ಷೀಯ ಸದಸ್ಯರೇ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ಈ ಮೂಲಕ ತಮ್ಮ ನಡೆಗೆ ಎನ್ಡಿಎ ಸದಸ್ಯರು ಮಾತ್ರವಲ್ಲ, ತಮ್ಮದೇ ಪಕ್ಷದ ನಾಯಕರೇ ಕಿಡಿಕಾರಿದ್ದರು ಎಂದು ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ.
ನಾಲ್ಕು ದಿನಗಳ ವಿದೇಶ ಯಾತ್ರೆಯ ಮೊದಲ ಭಾಗವಾಗಿ ಬುಧವಾರ ಜರ್ಮನಿಗೆ ಆಗಮಿಸಿದ ರಾಹುಲ್ ಗಾಂಧಿ, ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡುವ ವೇಳೆ ಅವರು ಈ ವಿಷಯ ತಿಳಿಸಿದರು. ಇದೇ ವೇಳೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ‘ದೇಶದಲ್ಲಿ ಉದ್ಯೋಗ ಸೃಷ್ಟಿಒಂದು ದೊಡ್ಡ ಸಮಸ್ಯೆಯಾಗಿದೆ.
ಆದರೆ, ಈ ಬಗ್ಗೆ ಪ್ರಧಾನಿ ಮೋದಿ ಅವರು ಗಮನ ಹರಿಸುತ್ತಿಲ್ಲ. ಯಾವುದೇ ಸಮಸ್ಯೆ ನಿವಾರಣೆಗಾಗಿ ಮೊದಲು ಆ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳಬೇಕು,’ ಎಂದರು. ಇದೇ ವೇಳೆ ತಮ್ಮ ತಂದೆ ರಾಜೀವ್ ಗಾಂಧಿ ಹತ್ಯೆ ಬಗ್ಗೆಯೂ ಮಾತನಾಡಿದ ಅವರು, ‘ನನ್ನ ತಂದೆಯ ಹತ್ಯೆಕೋರನಾದ ಎಲ್ಟಿಟಿಇ ಮುಖ್ಯಸ್ಥ ಪ್ರಭಾಕರನ್ ಶ್ರೀಲಂಕಾದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಾಗಲೂ ಅದನ್ನು ನಾನು ಸಹಿಸಿರಲಿಲ್ಲ,’ ಎಂದು ಹೇಳುವ ಮೂಲಕ ತಾನೋರ್ವ ಶಾಂತಿಯ ಪ್ರತಿಪಾದಕ ಎಂಬುದಾಗಿ ಬಿಂಬಿಸಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.