ಅನಾರೋಗ್ಯಕ್ಕೀಡಾದ ಹೆತ್ತ ತಾಯಿಯನ್ನು ಕೊಂದ ಪಾಪಿ ಪುತ್ರ

Published : Jan 05, 2018, 01:41 PM ISTUpdated : Apr 11, 2018, 12:44 PM IST
ಅನಾರೋಗ್ಯಕ್ಕೀಡಾದ ಹೆತ್ತ ತಾಯಿಯನ್ನು ಕೊಂದ ಪಾಪಿ ಪುತ್ರ

ಸಾರಾಂಶ

ಅನಾರೋಗ್ಯಕ್ಕೆ ಒಳಗಾಗಿದ್ದ ಹೆತ್ತ ತಾಯಿಯನ್ನೇ ಮಗ ತಾನು ವಾಸಿಸುವ ಅಪಾರ್ಟ್’ಮೆಂಟ್’ನಿಂದ ಕೆಳಕ್ಕೆ ತಳ್ಳಿ ಹತ್ಯೆ ಮಾಡಿರುವ ಘಟನೆಯೊಂದು ರಾಜ್’ಕೋಟ್’ನಲ್ಲಿ ಬೆಳಕಿಗೆ ಬಂದಿದೆ.  

ರಾಜ್’ಕೋಟ್ (ಜ.05): ಅನಾರೋಗ್ಯಕ್ಕೆ ಒಳಗಾಗಿದ್ದ ಹೆತ್ತ ತಾಯಿಯನ್ನೇ ಮಗ ತಾನು ವಾಸಿಸುವ ಅಪಾರ್ಟ್’ಮೆಂಟ್’ನಿಂದ ಕೆಳಕ್ಕೆ ತಳ್ಳಿ ಹತ್ಯೆ ಮಾಡಿರುವ ಘಟನೆಯೊಂದು ರಾಜ್’ಕೋಟ್’ನಲ್ಲಿ ಬೆಳಕಿಗೆ ಬಂದಿದೆ.  

ಆದರೆ ಈ ಬಗ್ಗೆ ದೂರು ನೀಡಿದ್ದ ಮಗ ಸಂದೀಪ್ ನೀರು ಕುಡಿಯಲು ತೆರಳಿದ ತಾಯಿ ಕೆಳಕ್ಕೆ ಬಿದ್ದಿದ್ದಾರೆ ಎಂದು ಹೇಳಿದ್ದರು. 

ಆದರೆ  ತಾಯಿಯನ್ನು ಮನೆಯ ಒಳಗಿಂದ ಎಳೆದು ತಂದು ಕೆಳಕ್ಕೆ ಎಸೆದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದರಿಂದ ಮಗನೇ ತಾಯಿಯನ್ನು ಹತ್ಯೆ ಮಾಡಿದ್ದಾನೆ ಎನ್ನುವುದು ತಿಳಿದು ಬಂದಿದೆ. 

ಈತ ರಾಜ್’ಕೋಟ್ ಕಾಲೇಜೊಂದರಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿಸಿಟಿವಿ ಪರಿಶೀಲನೆ ಬಳಿಕ  ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಂದೀಪ್ ಅವರು ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು,  ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಬಂಧಿಸಲಾಗುವುದು ಎಂದು ರಾಜ್’ಕೋಟ್ ಪೊಲೀಸರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಾಮಾಜಿಕ ಭದ್ರತಾ ಪಿಂಚಣಿಯಲ್ಲಿ 24.55 ಲಕ್ಷ ಅನುಮಾನಾಸ್ಪದ ಫಲಾನುಭವಿಗಳು: ಕೃಷ್ಣ ಬೈರೇಗೌಡ
ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ