ಅಪ್ಪನ ಸಾವಿನಿಂದ ನೊಂದ ಮಗ ಆತ್ಮಹತ್ಯೆಗೆ ಯತ್ನ

Published : Jun 20, 2018, 02:35 PM IST
ಅಪ್ಪನ ಸಾವಿನಿಂದ ನೊಂದ ಮಗ ಆತ್ಮಹತ್ಯೆಗೆ ಯತ್ನ

ಸಾರಾಂಶ

ಸುಮಾರು 7 ಲಕ್ಷ ರೂ. ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ತಂದೆ ಮಳೆಬೆಳೆ ಇಲ್ಲದೆ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ

ಚಿತ್ರದುರ್ಗ[ಜೂ.20]: ಅಪ್ಪನ ಆತ್ಮಹತ್ಯೆಯಿಂದ ನೊಂದ ಮಗ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಲಂಬಾಣಿಹಟ್ಟಿಯಲ್ಲಿ‌ ನಡೆದಿದೆ.

ವೆಂಕಟೇಶ್ (22) ಆತ್ಮಹತ್ಯೆಗೆ ಯತ್ನಿಸಿದ ಯುವಕ.  ಈತನನ್ನು ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸಾಲಬಾಧೆ ಹಿನ್ನಲೆಯಲ್ಲಿ ನಿನ್ನೆ ರೈತ ರಾಮನಾಯ್ಕ (60)ಆತ್ಮಹತ್ಯೆಗೆ ಶರಣಾಗಿದ್ದರು.

ನಿನ್ನೆ ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಸುಮಾರು 7 ಲಕ್ಷ ಕೈ ಸಾಲ ಮಾಡಿ ಕೊಳವೆ ಬಾವಿ ಕೊರೆಸಿದ್ದು  ವಿಫಲವಾಗಿತ್ತು. ಮಳೆ- ಬೆಳೆ ಇಲ್ಲದೆ ಸಾಲ ತೀರಿಸುವ ಚಿಂತೆಗೀಡಾಗಿದ್ದರು ರಾಮನಾಯ್ಕ್. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!