
ಕಾಂಗ್ರೆಸ್ನ ಹಾಲಿ ಶಾಸಕ ಆರ್.ವಿ. ದೇವರಾಜು ಅವರಿಗೆ ಮರು ಆಯ್ಕೆಯ ಬಯಕೆಯಿದ್ದರೂ, ಆರೋಗ್ಯ ಸಹಕರಿಸುತ್ತಿಲ್ಲ ಎಂಬ ಮಾತಿದೆ. ಒಂದು ವೇಳೆ ದೇವರಾಜು ಅವರಿಗೆ ಟಿಕೆಟ್ ತಪ್ಪುವುದಾದರೇ ಅದು ಅವರ ಕುಟುಂಬಕ್ಕೆ ಸಿಗುವ ಸಾಧ್ಯತೆಯೇ ಹೆಚ್ಚು. ಅವರ ಪುತ್ರ ಯುವರಾಜ್ ಈಗಾಗಲೇ ರಾಜಕೀಯದಲ್ಲಿದ್ದು, ಕಾರ್ಪೊರೇಟರ್ ಆಗಿದ್ದಾರೆ. ಜತೆಗೆ, ದೇವರಾಜು ಅವರ ಪತ್ನಿಯ ಹೆಸರೂ ಕೇಳಿಬರುತ್ತಿದೆ.
ಇನ್ನು ಬಿಜೆಪಿಯಲ್ಲಿ ನಗರ ವಕ್ತಾರ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ಅವರ ಹೆಸರು ಚಲಾವಣೆಯಲ್ಲಿದೆ. ಅವರೊಂದಿಗೆ ಉದ್ಯಮಿ ಉದಯ್ ಗರುಡಾಚಾರ್, ಮಾಜಿ ಶಾಸಕ ಹೇಮಚಂದ್ರ ಸಾಗರ್, ಬಿಬಿಎಂಪಿ ಸದಸ್ಯ ಕೆಂಪೇಗೌಡ ಅವರೂ ಬಿಜೆಪಿ ಟಿಕೆಟ್ಗೆ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಜೆಡಿಎಸ್ಪಕ್ಷದಿಂದ ಬೆಂಗಳೂರು ನಗರ ಜಿಲ್ಲಾ ಮಹಿಳಾ ಜೆಡಿಎಸ್ ಅಧ್ಯಕ್ಷೆ ಲತಾ ಶಿವಕುಮಾರ್ ಅವರ ಹೆಸರು ಮುಂಚೂಣಿಯಲ್ಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.