
ಚನ್ನಪಟ್ಟಣ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹೆತ್ತ ತಾಯಿಯನ್ನೇ ಕೊಂದ ಪುತ್ರ ಆಕೆಯ ಶವವನ್ನು ಶೌಚದ ಗುಂಡಿಯಲ್ಲಿ ಹೂತು ಹಾಕಿದ ಘಟನೆ ತಾಲೂಕಿನ ನಾಗವಾರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗಮ್ಮ (70) ಎಂಬುವರೇ ಮಗನಿಂದಲೇ ಕೊಲೆಯಾದವರು.
ಸುರೇಶ್(38) ಎಂಬಾತನೇ ತಾಯಿಯನ್ನೇ ಕೊಲೆ ಮಾಡಿದ ಆರೋಪಿ. ಸದ್ಯ ಆರೋಪಿಯನ್ನು ಎಂ. ಕೆ.ದೊಡ್ಡಿ ಪೊಲೀಸರು ಬಂಧಿಸಿದ್ದಾರೆ. ಆಟೋ ಚಾಲಕನಾದ ಸುರೇಶ್ ಸಾಕಷ್ಟು ಸಾಲ ಮಾಡಿಕೊಂಡಿದ್ದು, ತನ್ನ ಹೆಸರಿಗೆ ಜಮೀನು ವರ್ಗಾವಣೆ ಮಾಡುವಂತೆ ನಾಗಮ್ಮ ನನ್ನು ಪದೇ ಪದೆ ಪೀಡಿಸುತ್ತಿದ್ದ. ತಾಯಿ ಜಮೀನನ್ನು ನೀಡಲು ಒಪ್ಪದ ಹಿನ್ನೆಲೆಯಲ್ಲಿ ಆಕೆಯನ್ನು ಬೆಡ್ಶೀಟ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿ ಮನೆಯ ಹಿತ್ತಲಿನಲ್ಲಿದ್ದ ಶೌಚಾಲಯದ ಗುಂಡಿಯಲ್ಲಿ ಹಾಕಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.