
ಉಡುಪಿ (ಸೆ.19): ಉದ್ಯಮಿ ಭಾಸ್ಕರಶೆಟ್ಟಿ ಹೋಮಕುಂಡ ಹತ್ಯೆ ಪ್ರಕರಣದಲ್ಲಿ ಸಿಐಡಿ ಮಹತ್ವದ ತನಿಖೆ ಆರಂಭಿಸಿದೆ. ಇದೇ ಮೊದಲ ಬಾರಿಗೆ ಪ್ರಧಾನ ಆರೋಪಿ ಪುತ್ರ ನವನೀತನನ್ನು ವಶಕ್ಕೆ ಪಡೆದಿದೆ.
ಇಂದು ಉಡುಪಿ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ವಾದ ಮಂಡಿಸಿದ ಆರೋಪಿ ಪರ ವಕೀಲರು, ನವನೀತ ಅಸ್ತಮಾ ರೋಗಿಯಾಗಿದ್ದಾನೆ. ಹೀಗಾಗಿ ಸಿಐಡಿ ವಶಕ್ಕೆ ನೀಡಬಾರದೆಂದು ಮನವಿ ಮಾಡಿದರು.
ಈ ವಾದಕ್ಕೆ ನ್ಯಾಯಾಲಯ ಮನ್ನಣೆ ನೀಡಲಿಲ್ಲ. ಎರಡು ದಿನಗಳ ತನಿಖೆಗೆ ನವನೀತನನ್ನು ಸಿಐಡಿ ವಶಕ್ಕೆ ನೀಡಲಾಗಿದೆ. ಇಂದು ರಾಜೇಶ್ವರಿ ಹಾಗೂ ಸಾಕ್ಷ್ಯ ನಾಶ ಮಾಡಿದ ಶ್ರೀನಿವಾಸ ಭಟ್ಟ ಹಾಗೂ ರಾಘವೇಂದ್ರನಿಗೆ ಅಕ್ಟೋಬರ್ 3 ರವೆರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.