ವೇಶ್ಯಾವಾಟಿಕೆ ಕೇಸ್‌'ನಲ್ಲಿ ಸಿಕ್ಕಿ ಬಿದ್ದ ಶಾಸಕನ ಮಗ!

Published : Sep 14, 2016, 03:09 AM ISTUpdated : Apr 11, 2018, 01:12 PM IST
ವೇಶ್ಯಾವಾಟಿಕೆ ಕೇಸ್‌'ನಲ್ಲಿ ಸಿಕ್ಕಿ ಬಿದ್ದ ಶಾಸಕನ ಮಗ!

ಸಾರಾಂಶ

ಮಡಿಕೇರಿ(ಸೆ.14): ತುರುವೇ ಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಪುತ್ರ ರಾಜೀವ್ ವಿರುದ್ಧ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಕೇಳಿ ಬಂದಿದೆ. ರಾಜೀವ್ ಮತ್ತು ಆತನ ಸ್ನೇಹತರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.

ಕೊಡಗಿನ ಸೋಮವಾರ ಪೇಟೆ ತಾಲೂಕಿನ ಚಿಕ್ಕಬೆಟಗೇರಿ ಗ್ರಾಮದಲ್ಲಿರುವ ಕೂರ್ಗ ರಿವರ್ ವ್ಯೂ ಹೆಸರಿನ ಅಕ್ರಮ ಹೋಂ ಸ್ಟೇ ಮೇಲೆ ದಾಳಿ ನಡೆಸಿದ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಇದರ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ, ರಾಜೀವ್, ಮಧು, ಪ್ರಮೋದ್, ಪ್ರಸನ್ನ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 34 ಸಾವಿರ ನಗದು, ಒಂದು ಮಾರುತಿ ಕಾರುನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೀಕ್ ಡೇಸಲ್ಲಿ ಫ್ರೊಫೆಸರ್, ವೀಕೆಂಡ್‌ನಲ್ಲಿ ಖತರ್ನಾಕ್ ಕಳ್ಳಿ! ಮದುವೆ ಮನೆಗಳಲ್ಲಿ ಕನ್ನ ಹಾಕುತ್ತಿದ್ದ ಶಿಕ್ಷಕಿ!
2026 Holiday Calendar:ಮುಂದಿನ ವರ್ಷ ಕುಟುಂಬದ ಜೊತೆ ಟ್ರಿಪ್ ಹೋಗೋಕೆ ಇಲ್ಲಿದೆ ಬೆಸ್ಟ್ ಲೀವ್ ಪ್ಲಾನ್!