ಬಿಜೆಪಿ ಮಣಿಸಲು ಸೋನಿಯಾ ಔತಣಕೂಟ

Published : Mar 14, 2018, 07:59 AM ISTUpdated : Apr 11, 2018, 01:06 PM IST
ಬಿಜೆಪಿ ಮಣಿಸಲು ಸೋನಿಯಾ ಔತಣಕೂಟ

ಸಾರಾಂಶ

2014 ರ ಲೋಕಸಭಾ ಚುನಾವಣೆಯ ಹೀನಾಯ ಸೋಲು ಮತ್ತು ನಂತರದ ದಿನಗಳಲ್ಲಿ ವಿವಿಧ  ರಾಜ್ಯಗಳಲ್ಲಿನ ಸತತ ಸೋಲಿನ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ  ಸೋನಿಯಾ ಗಾಂಧಿ, ಮಂಗಳವಾರ ಇಲ್ಲಿ 20  ವಿಪಕ್ಷಗಳ ನಾಯಕರಿಗೆ ಔತಣ ಕೂಟವೊಂದನ್ನು ಆಯೋಜಿಸಿದ್ದರು.

ನವದೆಹಲಿ (ಮಾ. 14): 2014 ರ ಲೋಕಸಭಾ ಚುನಾವಣೆಯ ಹೀನಾಯ ಸೋಲು ಮತ್ತು ನಂತರದ ದಿನಗಳಲ್ಲಿ ವಿವಿಧ  ರಾಜ್ಯಗಳಲ್ಲಿನ ಸತತ ಸೋಲಿನ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ  ಸೋನಿಯಾ ಗಾಂಧಿ, ಮಂಗಳವಾರ ಇಲ್ಲಿ 20  ವಿಪಕ್ಷಗಳ ನಾಯಕರಿಗೆ ಔತಣ ಕೂಟವೊಂದನ್ನು ಆಯೋಜಿಸಿದ್ದರು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ  ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸವಾಲು ಹಾಕುವ  ನಿಟ್ಟಿನಲ್ಲಿ ಹೊಸ ರಾಜಕೀಯ ಮೈತ್ರಿಕೂಟ ರಚಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ ಈ ಔತಣಕೂಟ  ಆಯೋಜಿಸಲಾಗಿತ್ತು. ಎನ್ನಲಾಗಿದೆ.
ಸೋನಿಯಾರ ನಿವಾಸ ಜನಪಥ ೧೦ರಲ್ಲಿ ನಡೆದ ಈ  ಔತಣ ಕೂಟದಲ್ಲಿ ಎನ್‌ಸಿಪಿ, ಆರ್‌ಜೆಡಿ, ಎಸ್‌ಪಿ,  ಜೆಡಿಎಸ್, ಬಿಎಸ್ಪಿ, ಟಿಎಂಸಿ, ಡಿಎಂಕೆ ಮತ್ತು ಎಡಪಕ್ಷಗಳ  ನಾಯಕರು ಭಾಗಿಯಾಗಿದ್ದರು. ಮುಖ್ಯವಾಗಿ ಎನ್ ಸಿಪಿಯ ಶರದ್ ಪವಾರ್, ಡಿಎಂಕೆಯ ಕನಿಮೋಳಿ, ಎಸ್‌ಪಿಯ ರಾಂಗೋಪಾಲ್ ಯಾದವ್, ಬಿಎಸ್ಪಿ ಸತೀಶ್ ಚಂದ್ರ, ನ್ಯಾಷನಲ್ ಕಾನ್ಫರೆನ್ಸ್‌ನ ಒಮರ್ ಅಬ್ದುಲ್ಲಾ, ಜೆಡಿಯು ಬಂಡಾಯ ಬಣದ ಶರದ್ ಯಾದವ್, ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

10 ವರ್ಷ ಪ್ರೀತಿಸಿದವಳಿಗೆ ಮೋಸ, ₹4.5 ಲಕ್ಷ ವಂಚನೆ, ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ!
ದಿವ್ಯಾಂಗ ಯುವತಿ ಮೇಲೆ ಬಲತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!