ರಾಹುಲ್‌ ಆಯ್ತು, ಈಗ ಸಚಿವ ಗಡ್ಕರಿಗೆ ಸೋನಿಯಾ ಭೇಷ್!

Published : Feb 08, 2019, 08:19 AM IST
ರಾಹುಲ್‌ ಆಯ್ತು, ಈಗ ಸಚಿವ ಗಡ್ಕರಿಗೆ ಸೋನಿಯಾ ಭೇಷ್!

ಸಾರಾಂಶ

ರಾಹುಲ್‌ ಆಯ್ತು, ಈಗ ಸಚಿವ ಗಡ್ಕರಿಗೆ ಸೋನಿಯಾ ಮೆಚ್ಚುಗೆ| ಮೇಜುಕುಟ್ಟಿ ಪ್ರಶಂಸೆ ವ್ಯಕ್ತಪಡಿಸಿದ ಯುಪಿಎ ಅಧ್ಯಕ್ಷೆ| ರಸ್ತೆ ನಿರ್ಮಾಣದಲ್ಲಿ ಅದ್ಭುತ ಸಾಧನೆಗೆ ಹೊಗಳಿಕೆ

ನವದೆಹಲಿ[ಫೆ.08]: ‘ಬಿಜೆಪಿಯಲ್ಲಿ ಧೈರ್ಯ ಹೊಂದಿರುವ ಏಕಮಾತ್ರ ವ್ಯಕ್ತಿ ಗಡ್ಕರಿ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮೆಚ್ಚುಗೆ ಸೂಚಿಸಿದ ಬೆನ್ನಲ್ಲೇ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಬಗ್ಗೆ ತೀವ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಗಡ್ಕರಿ ಅವರು ತಮ್ಮ ಇಲಾಖೆಯಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸೋನಿಯಾ ಅವರು ಗುರುವಾರ ಲೋಕಸಭೆಯಲ್ಲಿ ಮೇಜುಕಟ್ಟಿಗೌರವ ಸೂಚಿಸಿದ್ದರೆ, ಕಾಂಗ್ರೆಸ್ಸಿನ ಸದಸ್ಯರೂ ತಮ್ಮ ನಾಯಕಿಗೆ ಸಾಥ್‌ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಗಡ್ಕರಿ, ಕೆಲಸ ಮಾಡಿಕೊಟ್ಟಿದ್ದಕ್ಕಾಗಿ ಪಕ್ಷಭೇದವಿಲ್ಲದೇ ಸಂಸದರು ನನ್ನನ್ನು ಹೊಗಳುತ್ತಾರೆ ಎಂದು ಹೇಳಿದರು. ಆಗ ಬಿಜೆಪಿ ಸದಸ್ಯರು ಮೇಜುಕುಟ್ಟಲು ಆರಂಭಿಸಿದರು. ಈ ವೇಳೆ ಎದ್ದು ನಿಂತ ಮಧ್ಯಪ್ರದೇಶದ ಬಿಜೆಪಿ ಸಂಸದ ಗಣೇಶ್‌ ಸಿಂಗ್‌, ಸಚಿವರು ಮಾಡಿರುವ ಅದ್ಭುತ ಕೆಲಸಕ್ಕೆ ಸದನ ಮೆಚ್ಚುಗೆ ಸೂಚಿಸಬೇಕು ಎಂದು ಸಲಹೆ ಮಾಡಿದರು. ಅಲ್ಲಿವರೆಗೆ ಗಡ್ಕರಿ ಭಾಷಣವನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ಸೋನಿಯಾ, ನಗುಮುಖದೊಂದಿಗೆ ಮೇಜು ಕುಟ್ಟಲು ಪ್ರಾರಂಭಿಸಿದರು. ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಇತರೆ ಸದಸ್ಯರೂ ಮೇಜುಕಟ್ಟಿಸಚಿವರಿಗೆ ಪ್ರಶಂಸೆ ವ್ಯಕ್ತಪಡಿಸಿದರು.

ಬಿಜೆಪಿಗೆ ಮುಜುಗರವಾಗುವಂತಹ ಹೇಳಿಕೆಯನ್ನು ನೀಡುತ್ತಿರುವ ಗಡ್ಕರಿ, ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಹುಲ್‌ ಗಾಂಧಿ ಪಕ್ಕ ಕುಳಿತು ಗಂಭೀರ ಚರ್ಚೆಯಲ್ಲಿ ನಿರತರಾಗಿದ್ದುದು ಕೂಡ ಚರ್ಚೆಗೆ ಕಾರಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ