‘ಸುಳ್ಳು ಪತ್ತೆ ಯಂತ್ರದ ಎದುರು ಸೋನಿಯಾ ಕುಳ್ಳಿರಿಸಬೇಕು’

Published : Nov 21, 2018, 09:09 PM IST
‘ಸುಳ್ಳು ಪತ್ತೆ ಯಂತ್ರದ ಎದುರು ಸೋನಿಯಾ ಕುಳ್ಳಿರಿಸಬೇಕು’

ಸಾರಾಂಶ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ ಮುಗಿದ ಕೆಲವೇ ದಿನದಲ್ಲಿ ಸಿಖ್ ನರಮೇಧದ ವಿಚಾರ ತಲೆ ಎತ್ತಿದೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇನ್ನೊಮ್ಮೆ ಸುಳ್ಳು ಪತ್ತೆ ಯಂತ್ರದ ಎದಿರು ಕುಳ್ಳಿರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

ನವದೆಹಲಿ[ನ.21]  1984ರ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿ ಪ್ರಶ್ನಿಸಬೇಕು ಎಂದು ಪಂಜಾಬಿನ ಮಾಜಿ ಉಪ ಮುಖ್ಯಮಂತ್ರಿ  ಸುಖಬೀರ್‌ ಸಿಂಗ್‌ ಬಾದಲ್‌ ಆಗ್ರಹಿಸಿದ್ದಾರೆ.

ವಿಶೇಷ ತನಿಖಾ ತಂಡ ಸೋನಿಯಾ ಗಾಂಧಿಗೆ ಸಮನ್ಸ್‌ ಜಾರಿ ಮಾಡಬೇಕು. ಸೋನಿಯಾ ಗಾಂಧಿ ಅವರ ಪತಿ (ರಾಜೀವ್‌ ಗಾಂಧಿ) ಅಧಿಕಾರದಲ್ಲಿದ್ದಾಗ ಸೋನಿಯಾ ನಿವಾಸದಲ್ಲೇ 1984ರ ನರಮೇಧದ ಸಂಚು ರೂಪಿಸಲಾಗಿತ್ತು ಎಂಬ ಆರೋಪವನ್ನು ಮಾಡಿದ್ದಾರೆ.

1984ರ ಸಿಖ್ ನರಮೇಧದ ಅಪರಾಧಿಗಳಾದ ಯಶ್‌ಪಾಲ್‌ ಸಿಂಗ್‌ಗೆ ಮರಣ ದಂಡನೆ ಮತ್ತು ನರೇಶ್‌ ಸೆಹರಾವತ್‌ ಗೆ ಜೀವಾವಧಿ ಶಿಕ್ಷೆ ವಿಧಿಸಿ ದಿಲ್ಲಿ ಕೋರ್ಟ್‌ ತೀರ್ಪು ನೀಡಿದ ಮರು ದಿನವೇ ಸುಖಬೀರ್‌ ನೀಡಿರುವ ಹೇಳಿಕೆ ಪ್ರಾಮುಖ್ಯ ಪಡೆದಯಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ
ಮಗಳ ಸುರಕ್ಷತೆಗಾಗಿ ಅಮ್ಮನೇ ಅಪ್ಪನಾದ: ಗಂಡನ ಸಾವಿನ ನಂತರ ಗಂಡಿನಂತೆ ವೇಷ ಧರಿಸಿ ಬದುಕಿದ ತಾಯಿ