ಪಂಚ ಫಲಿತಾಂಶಕ್ಕೂ ಮುನ್ನವೇ ಮಹಾಘಟ್‌ ಬಂಧನ್‌... ಪ್ರಧಾನಿ ರೇಸ್‌ಗೆ ಇಷ್ಟೆಲ್ಲಾ ಸರ್ಕಸ್?

Published : Dec 03, 2018, 05:45 PM ISTUpdated : Dec 03, 2018, 05:53 PM IST
ಪಂಚ ಫಲಿತಾಂಶಕ್ಕೂ ಮುನ್ನವೇ ಮಹಾಘಟ್‌ ಬಂಧನ್‌... ಪ್ರಧಾನಿ ರೇಸ್‌ಗೆ ಇಷ್ಟೆಲ್ಲಾ ಸರ್ಕಸ್?

ಸಾರಾಂಶ

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ನರೇಂದ್ರ ಮೋದಿ ಮತ್ತು ಎನ್‌ಡಿಎ ವಿರುದ್ಧದ ಎಲ್ಲ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸುವ ಕೆಲಸ ಮಾಡಲು ಮುಂದಾಗುತ್ತಿದ್ದಾರೆ.

ನವದೆಹಲಿ[ಡಿ.03] ಡಿಸೆಂಬರ್ 10 ರಂದು ನಡೆಯಲಿರುವ ಬಿಜೆಪಿ ವಿರೋಧಿ ಪಕ್ಷಗಳ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್  ಅಧ್ಯಕ್ಷ ರಾಹುಲ್ ಗಾಂಧಿ ಸಹ ಸಭೆಯಲ್ಲಿ ಭಾಗವಹಿಸುವುದು ಖಚಿತವಾಗಿದೆ.

ತೆಲಗು ದೇಶಂ ಪಕ್ಷದ ಅಧ್ಯಕ್ಷ, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಎನ್‌ಡಿಎ ಮತ್ತು ಬಿಜೆಪಿ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕು ಎಂಬ ವಿಚಾರಗಳ ರೂಪು ರೇಷೆ ಸಿದ್ಧವಾಗಲಿದೆ.

ಕೊನೆಗೂ ಬಯಲಾಯ್ತು ಪ್ರಧಾನಿ ಮೋದಿಯ ಸಂಬಳ!

ಚಂದ್ರಬಾಬು ನಾಯ್ಡು ಲೋಕಸಭಾ ಚುನಾವಣೆಗೆ ತಿಂಗಳುಗಳು ಇರುವಾಗಲೇ ದೇಶಾದ್ಯಂತ ತಿರುಗಾಟ ನಡೆಸುತ್ತಿದ್ದಾರೆ. ಎನ್‌ಸಿಪಿಯ ಶರದ್ ಪವಾರ್ ಅವರನ್ನು, ಡಿಎಂಕೆಯ ಎಂಕೆ ಸ್ಟಾಲಿನ್ ಅವರನ್ನು ಸಹ ಕೈಜೋಡಿಸಲು ಕೇಳಿಕೊಂಡಿದ್ದಾರೆ.

ಪಂಚರಾಜ್ಯಗಳ ಫಲಿತಾಂಶ ಡಿಸೆಂಬರ್ 11ಕ್ಕೆ ಪ್ರಕಟವಾಗಲಿದ್ದು ಒಂದು ದಿನ ಮುಂಚಿತವಾಗಿಯೇ ಸಭೆ ನಡೆಸಲು ಚಂದ್ರಬಾಬು ಸಿದ್ಧತೆ ಮಾಡಿಕೊಂಡಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರನ್ನು ಸಹ ಬೆಂಗಳೂರಿಗೆ ಬಂದು ನಾಯ್ಡು ಭೇಟಿಯಾಗಿ ತೆರಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸೀಸ್‌ನಲ್ಲಿ ಮಕ್ಕಳಿಗೆ ಜಾಲತಾಣ ಬಳಕೆ ನಿಷೇಧ : ನಾಳೆಯಿಂದ ಜಾರಿ
ನಿಮ್ಮ ಪತ್ನಿ ಭಾರತಕ್ಕೆ ಕಳಿಸಿ : ವ್ಯಾನ್ಸ್‌ಗೆ ವಲಸಿಗರ ಟಾಂಗ್‌