
ನವದೆಹಲಿ: ಕರ್ನಾಟಕದ ರಂಗಭೂಮಿ ಕಲಾವಿದ, ಚಿತ್ರ ಕಥೆಗಾರ, ನಟ, ಸಾಹಿತಿ ಹಾಗೂ ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ಅಗಲಿಕೆಗೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾರ್ನಾಡ್ ಅವರು ತಮ್ಮ ಜೀವನ ಪರ್ಯಂತ ಸಾಮಾಜಿಕ ನ್ಯಾಯ, ಜಾತ್ಯತೀತ ನಿಲುವುಗಳು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು ಎಂದು ಸೋನಿಯಾ ಕೊಂಡಾಡಿದ್ದಾರೆ.
ಈ ಬಗ್ಗೆ ಕಾರ್ನಾಡ್ ಅವರ ಪತ್ನಿ ಸರಸ್ವತಿ ಅವರಿಗೆ ಪತ್ರ ಬರೆದಿರುವ ಸೋನಿಯಾ ಅವರು, ‘ಕಾರ್ನಾಡ್ ಅವರ ಅಗಲಿಕೆಯ ಶೂನ್ಯವನ್ನು ಯಾರಿಂದಲೂ ತುಂಬಲು ಅಸಾಧ್ಯ. ಕಾರ್ನಾಡ್ ಅವರು ಬೆಲೆಕಟ್ಟಲಾಗದ ಪರಂಪರೆಯನ್ನು ಬಿಟ್ಟು ಹೋಗಿದ್ದು, ಸಾಹಿತ್ಯಕ್ಕೆ ಅವರು ನೀಡಿದ ಮಹಾನ್ ಕೊಡುಗೆಯು ಅವರನ್ನು ಸದಾ ಜೀವಂತವಾಗಿರಿಸುತ್ತದೆ’ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.