
ಮೈಸೂರು [ಸೆ.01] : ಡಿಸೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಮತ್ತೊಂದು ಚುನಾವಣೆ ಬರಲಿದೆ ಸಿದ್ಧರಾಗಿ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ಧರಾಮಯ್ಯ ನಾವೆಲ್ಲರೂ ಉಪ ಚುನಾವಣೆಗೆ ಸಿದ್ಧರಾಗಿದ್ದೇವೆ. ಇದರ ಜೊತೆಗೆ ಮಧ್ಯಂತರ ಚುನಾವಣೆಗೆ ತಯಾರಾಗಿ ಎಂದು ಕಾರ್ಯರ್ತರಿಗೆ ಹೇಳಿದ್ದೇನೆ ಎಂದು ಸಿದ್ಧರಾಮಯ್ಯ ಹೇಳಿದರು.
ನಿನ್ನೆ ದಕ್ಷಿಣ ಕನ್ನಡಕ್ಕೂ ಹೋಗಿದ್ದೆ. ಆಗ ನಮ್ಮ ಕಾರ್ಯಕರ್ತರಿಗೆ ಡಿಸೆಂಬರ್ಗೆ ಜನರಲ್ ಎಲೆಕ್ಷನ್ ಬರಬಹುದು ರೆಡಿಯಾಗಿ ಎಂದು ಹೇಳಿದ್ದೇನೆ. ಯಾಕೆಂದರೆ ಈ ಸರ್ಕಾರ ನೋಡಿದರೆ ಇವರು ಸೂಕ್ತವಾಗಿ ಅಧಿಕಾರ ನಡೆಸಿಕೊಂಡು ಹೋಗುತ್ತಾರೆ ಎನಿಸುತ್ತಿಲ್ಲ. ಆದ್ದರಿಂದ ಡಿಸೆಂಬರ್ಗೆ ಜನರಲ್ ಎಲೆಕ್ಷನ್ ಬರತ್ತೆ ರೆಡಿ ಆಗಿ ಎಂದಿದ್ದೇನೆ ಎಂದು ಹೇಳಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಶನಿವಾರವಷ್ಟೇ ದಕ್ಷಿಣ ಕನ್ನಡಕ್ಕೆ ತೆರಳಿದ್ದ ವೇಳೆಯೂ ರಾಜ್ಯದಲ್ಲಿ ಶೀಘ್ರ ಚುನಾವಣೆ ಬರಲಿದೆ ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ಚುನಾವಣೆಗೆ ಬಗ್ಗೆ ಮಾತನಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.