
ಬೆಂಗಳೂರು [ಜು.24]: ಮೈತ್ರಿ ಪತನವಾಗಿದೆ. ಅತೃಪ್ತರಾಗಿ ಮುಂಬೈಗೆ ತೆರಳಿರುವವರು ರಾಜೀನಾಮೆ ನೀಡಿದ್ದು, ಇವರ ಸ್ಥಾನಗಳಿಗೆ ಚುನಾವಣೆ ನಡೆದರೆ ಶೀಘ್ರ ಉಪ ಚುನಾವಣೆ ಎದುರಾಗುವ ಸಾಧ್ಯತೆ ಇದೆ.
ಇನ್ನು ಶೀಘ್ರವೇ ಎದುರಾಗಲಿರುವ ಉಪ ಚುನಾವಣೆ ಸಂದರ್ಭದಲ್ಲೂ ಈ ಮೈತ್ರಿಕೂಟ ಒಗ್ಗೂಡಿ ಕೆಲಸ ಮಾಡುವ ಸಾಧ್ಯತೆ ಕಡಿಮೆ. ಆದರೆ, ಬಿಜೆಪಿಯನ್ನು ಮಣಿಸಬೇಕಾದ ಸವಾಲು ಇರುವ ಕಾರಣ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯೂ ಇದೆ.
ಉಪ ಚುನಾವಣೆಯಲ್ಲಿ ಬಿಜೆಪಿಯು ಹೆಚ್ಚಿನ ಸಂಖ್ಯೆ ಗಳಿಸಲು ಸಾಧ್ಯವಾಗದೇ ಹೋದರೆ ಹೊಸ ಸರ್ಕಾರವು ಪತನಗೊಳ್ಳುವ ಸಾಧ್ಯತೆಯಿರುವುದರಿಂದ ಮೈತ್ರಿಕೂಟವು ಈ ಚುನಾವಣೆಯಲ್ಲಿ ಮತ್ತೆ ಒಗ್ಗೂಡಬಹುದು. ಒಂದು ವೇಳೆ ಮೈತ್ರಿ ಮಾಡಿಕೊಳ್ಳದೆ ಇದ್ದರೂ ಫ್ರೆಂಡ್ಲಿ ಫೈಟ್ ಸಾಧ್ಯತೆ ಹೆಚ್ಚಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.