
ಕೋಲ್ಕತ್ತಾ(ಜ.09): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಕೊಲೆ ಮಾಡುವುದಾಗಿ ಅನಾಮಧೇಯ ಜೀವ ಬೆದರಿಕೆ ಪತ್ರ ಬಂದಿದೆ. ಜನವರಿ 5 ರಂದು ಗಂಗೂಲಿ ಅವರ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಪತ್ರ ಬಂದಿದೆ ಎಂದು ಗಂಗೂಲಿ ಖಚಿತ ಪಡಿಸಿದ್ದಾರೆ.
ಜನವರಿ 19ರಂದು ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ವಿದ್ಯಾಸಾಗರ್ ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತಾವು ಹಾಜರಾದರೆ ಗಂಭೀರ ಪರಿಣಾಮ ಎದುರಿಸಲಾಗಬೇಕಾಗುತ್ತದೆ ಎಂದು ಬೆದರಿಕೆ ಪತ್ರದಲ್ಲಿ ತಿಳಿಸಲಾಗಿದೆ. ಆದಾಗ್ಯೂ ಗಂಗೂಲಿ ಅವರು ಜಿಲ್ಲೆಯ ವರಿಷ್ಠಾಧಿಕಾರಿ ಅವರಿಗೆ ತಿಳಿಸಿದ್ದಾರೆ. ಆದರೆ ಅಧಿಕೃತವಾಗಿ ದೂರು ನೀಡಿಲ್ಲ ಎಂದು ನೈರುತ್ಯ ವಿಭಾಗದ ಪೊಲೀಸ್ ಉಪ ಆಯುಕ್ತ ಮೇರಾಜ್ ಖಲೀದ್ ತಿಳಿಸಿದ್ದಾರೆ. ಗಂಗೂಲಿ ಪ್ರಸ್ತುತ ಬಂಗಾಳ ಕ್ರಿಕೆಟ್ ಅಸೋಸಿಯೇಷನ್'ನ ಅಧ್ಯಕ್ಷರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.