ರಾಹುಲ್, ಸೋನಿಯಾಗಾಗಿ ಎಸ್ಪಿ-ಬಿಎಸ್‌ಪಿಯಿಂದ ಇದೆಂಥಾ ತ್ಯಾಗ?

Published : Jul 19, 2018, 04:39 PM ISTUpdated : Jul 19, 2018, 04:45 PM IST
ರಾಹುಲ್, ಸೋನಿಯಾಗಾಗಿ ಎಸ್ಪಿ-ಬಿಎಸ್‌ಪಿಯಿಂದ ಇದೆಂಥಾ ತ್ಯಾಗ?

ಸಾರಾಂಶ

ಲೋಕಸಭಾ ಚುನಾವಣೆ ಬಿಸಿ ಇದಾಗಲೆ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲ ವಿಪಕ್ಷಗಳು ಒಂದಾಗಿವೆ. ಲೋಕಸಭಾ ಚುನಾವಣೆಯಲ್ಲಿ ಯಾರು ಯಾರನ್ನು ಬೆಂಬಲಿಸುತ್ತಾರೆ ಎಂಬುದು ಸದ್ಯದ ಪ್ರಶ್ನೆ.

ಲಕ್ನೋ[ಜು.19] ಲೋಕಸಭಾ ಚುನಾವಣೆ ಎಂದ ತಕ್ಷಣ ರಾಹುಲ್ ಮತ್ತು ಸೋನಿಯಾ ಸ್ಪರ್ಧೆ ಮಢುವ ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರದ ಬಗ್ಗೆ ಹೇಳಲೇಬೇಕು. ಈಗ ನಾವೆಲ್ಲರೂ ಒಂದೇ ಎಂದು ಹೇಳಿಕೊಳ್ಳುತ್ತಿರುವ ಸಮಾಜವಾದಿ[ಎಸ್ಪಿ] ಮತ್ತು ಬಹುಜನ ಸಮಾಜವಾದಿ[ಬಿಎಸ್‌ ಪಿ]  ಪಕ್ಷಗಳು ಕಾಂಗ್ರೆಸ್ ಬೆನ್ನಿಗೆ ನಿಲ್ಲುತ್ತವೆಯೇ? ಸೋನಿಯಾ ಮತ್ತೆ ರಾಹುಲ್ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ನಿಲ್ಲಿಸುತ್ತವೆಯೇ? ಎಂಬ ಪ್ರಶ್ನೆಯೂ ಅಷ್ಟೆ ಪ್ರಮುಖವಾಗುತ್ತದೆ.

ಮೂಲಗಳು ಹೇಳುವ ಪ್ರಕಾರ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಲು ಎಸ್ ಪಿ ಮತ್ತು ಬಿಎಸ್ ಪಿ ನಿರ್ಧಾರ ಮಾಡಿಕೊಂಡಿವೆ. ಅಖಿಲೇಶ್ ಯಾದವ್ ಮತ್ತು ಮಾಯಾವತಿ ಕಾಂಗ್ರೆಸ್ ಗೆ ಬೆಂಬಲ ಸೂಚಿಸಲು ನಿರ್ಧಾರ ಮಾಡಿದ್ದಾರೆ.

ಕಾಡು ಪ್ರಾಣಿಗಳಿಗೂ ಮೋದಿ ಭಾಷಣ ಕೇಳುವ ಅವಕಾಶ!

ಮಹಾ ಘಟಬಂಧನ ಎಂದು ಕರೆದುಕೊಂಡಿರುವ ಮೈತ್ರಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದು ಮಧ್ಯಪ್ರದೇಶದ ವಿಧಾನಸಭೆ ಚುನಾವಣೆ ವೇಳೆ ಬಹಿರಂಗವಾಗಲಿದೆ. ದೊಡ್ಡ ರಾಜ್ಯಗಳಲ್ಲಿ ಸ್ಥಾನ ಹಂಚಿಕೆ ಮಾಡಿಕೊಳ್ಳುತ್ತಾರೋ? ಅಥವಾ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಾರೋ? ಎನ್ನುವುದರ ಅಂತಿಮ ನಿರ್ಧಾರಕ್ಕೆ ಬರಲು ಇನ್ನು ಅನೇಕ ದಿನ ಬೇಕು.

ಒಂದೆಡೆ ಕಾರ್ಯಕರ್ತರಿಗೆ ಸಂದೇಶ ನೀಡುವುದು, ಇಷ್ಟು ದಿನ ಕಾಪಾಡಿಕೊಂಡು ಬಂದ ಸಿದ್ಧಾಂತಗಳನ್ನು ಬದಲಾಯಿಸಿಲ್ಲ ಎಂದು ಜನರಿಗೆ ಹೇಳುವುದು ಜತೆಗೆ ತಮ್ಮ ಅಸ್ತಿತ್ವ ಕಾಪಾಡಿಕೊಳ್ಳುವ ಸವಾಲುಗಳು ಆಯಾ ಪಕ್ಷದ ಮೇಲೆ ಇದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ