ರಸ್ತೆ ಅಪಘಾತದಲ್ಲಿ ಲೋಕಾಯುಕ್ತ ಎಸ್'ಪಿ ದುರ್ಮರಣ

Published : Feb 22, 2017, 04:11 PM ISTUpdated : Apr 11, 2018, 01:08 PM IST
ರಸ್ತೆ ಅಪಘಾತದಲ್ಲಿ ಲೋಕಾಯುಕ್ತ ಎಸ್'ಪಿ ದುರ್ಮರಣ

ಸಾರಾಂಶ

ಬೆಂಗಳೂರು-ಮೈಸೂರು ರಸ್ತೆಯ ರಾಮೋಹಳ್ಳಿ ಗೇಟ್ ಬಳಿ ಎಸ್ಪಿ ಪ್ರಯಾಣಿಸುತ್ತಿದ್ದ  KA 01, G - 5856 ನಂಬರ್​ನ ಸ್ವಿಫ್ಟ್​ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್'ಗೆ ಅಪ್ಪಳಿಸಿ ನಂತರ ಟಿಪ್ಪರ್'ಗೆ ಡಿಕ್ಕಿಯಾದ ಕಾರಣ ಈ ಅಪಘಾತ ಸಂಭವಿಸಿದೆ.

ಬೆಂಗಳೂರು(ಫೆ.22): ರಸ್ತೆ ಅಪಘಾತದಲ್ಲಿ ಎಸ್​​​ಪಿ ಸೇರಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ಬೆಂಗಳೂರು-ಮೈಸೂರು ರಸ್ತೆಯ ರಾಮೋಹಳ್ಳಿ ಗೇಟ್ ಬಳಿ ನಡೆದಿದೆ. ಮೈಸೂರು ಲೋಕಾಯುಕ್ತ ಎಸ್'ಪಿ ರವಿ'ಕುಮಾರ್ ಹಾಗೂ ಚಾಲಕ ಕಿರಣ್'ಕುಮಾರ್ ಮೃತರು. ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದಾಗ ಬೆಂಗಳೂರು-ಮೈಸೂರು ರಸ್ತೆಯ ರಾಮೋಹಳ್ಳಿ ಗೇಟ್ ಬಳಿ ಎಸ್ಪಿ ಪ್ರಯಾಣಿಸುತ್ತಿದ್ದ  KA 01, G - 5856 ನಂಬರ್​ನ ಸ್ವಿಫ್ಟ್​ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್'ಗೆ ಅಪ್ಪಳಿಸಿ ನಂತರ ಟಿಪ್ಪರ್'ಗೆ ಡಿಕ್ಕಿಯಾದ ಕಾರಣ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎಸ್​​ಪಿ ರವಿಕುಮಾರ್ ಮೃತಪಟ್ಟಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿತ್ರದುರ್ಗ ದುರಂತ: ಮದುವೆ ಫಿಕ್ಸ್ ಆಗಿದ್ದ ಜೀವದ ಗೆಳತಿಯರಿಬ್ಬರ ಕೊನೆಯ ಪ್ರಯಾಣ! ಓದಿದ್ದೂ ಜೊತೆಯಲ್ಲೇ ಜೀವ ಹೋಗಿದ್ದೂ ಒಟ್ಟಿಗೆ!
ಭಾರತದಲ್ಲಿ ಮಿಡ್ಲ್ ಕ್ಲಾಸ್ ಮದುವೆ ಖರ್ಚು ಭಾರಿ ಏರಿಕೆ? ಅದ್ಧೂರಿ ವಿವಾಹಕ್ಕೆ ಲೆಕ್ಕವೇ ಸಿಗುತ್ತಿಲ್ಲ