ಪ್ರಧಾನಿ ಮೋದಿ, ಶಾರನ್ನು ಭಯೋತ್ಪಾದಕರಿಗೆ ಹೋಲಿಸಿದ ಎಸ್ಪಿ ನಾಯಕ

Published : Feb 20, 2017, 09:48 AM ISTUpdated : Apr 11, 2018, 12:44 PM IST
ಪ್ರಧಾನಿ ಮೋದಿ, ಶಾರನ್ನು ಭಯೋತ್ಪಾದಕರಿಗೆ ಹೋಲಿಸಿದ ಎಸ್ಪಿ ನಾಯಕ

ಸಾರಾಂಶ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಉತ್ತರ ಪ್ರದೇಶದ ಜನರನ್ನು ದಾರಿ ತಪ್ಪಿಸುವ ಮೂಲಕ ರಾಜಕೀಯ ಅಪರಾಧವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಲಕ್ನೋ (ಫೆ.20): ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭಯೋತ್ಪಾದರೆಂದು ಕರೆಯುವ ಮೂಲಕ ಸಮಾಜವಾದಿ ಪಕ್ಷ ಮುಖಂಡ ವಿವಾದವನ್ನು ಸೃಷ್ಟಿಸಿದ್ದಾರೆ.

ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಉತ್ತರ ಪ್ರದೇಶದ ಜನರನ್ನು ದಾರಿ ತಪ್ಪಿಸುವ ಮೂಲಕ ರಾಜಕೀಯ ಅಪರಾಧವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಜನರು ರಾಜಕಾರಣಕ್ಕೆ ಎಂದಿಗೂ ಅಗೌರವ ತೋರಿಸುವವರಲ್ಲ, ಅವರಿಗೆ ರಾಜಕೀಯ ಚೆನ್ನಾಗಿ ತಿಳಿದಿದೆ, ಅವರನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಚೌಧರಿ ಎಚ್ಚರಿಸಿದ್ದಾರೆ.   

ಬಿಜೆಪಿಯನ್ನು ಗೆಲ್ಲಿಸಲು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಧಾರ್ಮಿಕ ಭಾವನೆಗಲನ್ನು ಕೆರಳಿಸಲು ಯತ್ನಿಸುತ್ತಿದ್ದಾರೆ. ಉತ್ತರ ಪ್ರದೇಶದ ಮತದಾರರು ಬಿಜೆಪಿ ಹಾಗೂ ಅದರ ಸಿದ್ಧಾಂತವನ್ನು ಚೆನ್ನಾಗಿ ಬಲ್ಲರು; ಅವರ ತಂತ್ರಗಳಿಗೆ ರಾಜ್ಯದ ಜನರು ಎಂದಿಗೂ ಬಲಿಯಾಗುವುದಿಲ್ಲವೆಂದು ಅವರು ಹೇಳಿದ್ದಾರೆ.

ಇನ್ನೊಂದು ಕಡೆ, ಕಾಂಗ್ರೆಸ್ ಪಕ್ಷವು ಪ್ರಧಾನಿ ಮೋದಿ ವಿರುದ್ಧ ದೂರು ಸಲ್ಲಿಸಲು ನಿರ್ಧರಿಸಿದೆ. ನಿನ್ನೆ ಫತೇಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತಾಡುತ್ತಿದ್ದ ವೇಳೆ ಪ್ರಧಾನಿ ಆಡಿರುವ ಮಾತುಗಳು ಆಕ್ಷೇಪಾರ್ಹವಾಗಿವೆ ಎಂದು ಅದು ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ