ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ಎಸ್ಪಿ ಚೆನ್ನಣ್ಣನವರ್

Published : Dec 04, 2017, 01:49 PM ISTUpdated : Apr 11, 2018, 01:09 PM IST
ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ಎಸ್ಪಿ ಚೆನ್ನಣ್ಣನವರ್

ಸಾರಾಂಶ

ಸುವರ್ಣ ನ್ಯೂಸ್ ಜೊತೆ ಎಕ್ಸ್'ಕ್ಲೂಸಿವ್ ಆಗಿ ಮಾತನಾಡಿದ ರವಿ ಚೆನ್ನಣ್ಣನವರ್, ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಅಲ್ಲ. ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇವೆ. ನಾವು ಸತ್ಯದ ಪರ, ಬಡವರ ಪರ ಹಾಗೆಯೇ ಸರ್ವರ ಹಿತ ನಮಗೆ ಮುಖ್ಯ ಎನ್ನುವ ಮೂಲಕ ಮೈಸೂರು ಸಂಸದರಿಗೆ ಟಾಂಗ್ ನೀಡಿದ್ದಾರೆ.

ಮೈಸೂರು(ಡಿ.04): ನಾವು ಎಂದು ಪರಿಪೂರ್ಣರಲ್ಲ, ಅಣ್ಣಾಮಲೈಯಿಂದ ಹಿಡಿದು ಎಲ್ಲರಿಂದಲೂ ನಾನು ಕಲಿಯಬೇಕಿದೆ ಎಂದು ಹೇಳುವ ಮೂಲಕ ಮೈಸೂರು ಎಸ್ಪಿ ರವಿ ಚೆನ್ನಣ್ಣನವರ್ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ.

ಸುವರ್ಣ ನ್ಯೂಸ್ ಜೊತೆ ಎಕ್ಸ್'ಕ್ಲೂಸಿವ್ ಆಗಿ ಮಾತನಾಡಿದ ರವಿ ಚೆನ್ನಣ್ಣನವರ್, ನಾವು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಅಲ್ಲ. ಸಂವಿಧಾನದ ಆಶಯದಂತೆ ಕೆಲಸ ಮಾಡುತ್ತೇವೆ. ನಾವು ಸತ್ಯದ ಪರ, ಬಡವರ ಪರ ಹಾಗೆಯೇ ಸರ್ವರ ಹಿತ ನಮಗೆ ಮುಖ್ಯ ಎನ್ನುವ ಮೂಲಕ ಮೈಸೂರು ಸಂಸದರಿಗೆ ಟಾಂಗ್ ನೀಡಿದ್ದಾರೆ.   

ಮೈಸೂರಿನ ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲದ ಬಗ್ಗೆ ಟ್ವೀಟ್'ನಲ್ಲೇ ಪ್ರತಿಕ್ರಿಯೆ ನೀಡಿದ್ದ ಪ್ರತಾಪ್ ಸಿಂಹ, ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸರ್..? ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ, ದತ್ತ ಜಯಂತಿಯನ್ನು ಶಾಂತಿಯುತವಾಗಿ ನಡೆಸಿಕೊಟ್ಟ ಎಸ್ಪಿ ಅಣ್ಣಾಮಲೈ ಅವರನ್ನು ನೋಡಿ ಕಲಿಯಿರಿ ಎಂದು ಎಸ್ಪಿ ಚೆನ್ನಣ್ಣನವರಿಗೆ ಟಾಂಗ್ ಕೊಟ್ಟಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಪಿಜಿ ಕಟ್ಟದಲ್ಲಿ ಸಿಲಿಂಡರ್ ಸ್ಫೋಟ, ಎಂಜಿನೀಯರ್ ಸಾವು, ಮೂವರಿಗೆ ಗಾಯ
ಪ್ರೀತಿಸಿದ ಹುಡುಗಿ ಬೆನ್ನಲ್ಲೇ ಪೋಷಕರು ತೋರಿಸಿದಾಕೆ ಜೊತೆಗೂ ಮದುವೆ, ಮೃತ ಕತೆ ಕಟ್ಟಿ ತಗ್ಲಾಕೊಂಡ