ರಾಜಿ ಸಂಧಾನಕ್ಕೆ ಅಪ್ಪ ಮಗ ಬದ್ಧ; ಯಾದವೀ ಕಲಹಕ್ಕೆ ತಾತ್ಕಾಲಿಕ ತೆರೆ

Published : Jan 03, 2017, 11:24 AM ISTUpdated : Apr 11, 2018, 12:41 PM IST
ರಾಜಿ ಸಂಧಾನಕ್ಕೆ ಅಪ್ಪ ಮಗ ಬದ್ಧ; ಯಾದವೀ ಕಲಹಕ್ಕೆ ತಾತ್ಕಾಲಿಕ ತೆರೆ

ಸಾರಾಂಶ

ಅಖಿಲೇಶ್ ಯಾದವ್ ಹಾಗೂ ಮುಲಾಯಂ ಸಿಂಗ್ ನಡುವಿನ ರಾಜಕೀಯ ಪ್ರಹಸನಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಮೂರ್ನಾಲ್ಕು ತಾಸಿಗಿಂತ ಹೆಚ್ಚುಕಾಲ ಅವರಿಬ್ಬರ ನಡುವೆ ಆತ್ಮೀಯ ಮಾತುಕತೆ ನಡೆದಿದ್ದು ಇಬ್ಬರೂ ರಾಜಿ ಮಾಡಿಕೊಂಡಿದ್ದಾರೆ. ಆ ಪ್ರಕಾರ ಮುಲಾಯಂ ಸಿಂಗ್ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರಲಿದ್ದಾರೆ. ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಲಕ್ನೋ (ಜ.03): ಅಖಿಲೇಶ್ ಯಾದವ್ ಹಾಗೂ ಮುಲಾಯಂ ಸಿಂಗ್ ನಡುವಿನ ರಾಜಕೀಯ ಪ್ರಹಸನಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಮೂರ್ನಾಲ್ಕು ತಾಸಿಗಿಂತ ಹೆಚ್ಚುಕಾಲ ಅವರಿಬ್ಬರ ನಡುವೆ ಆತ್ಮೀಯ ಮಾತುಕತೆ ನಡೆದಿದ್ದು ಇಬ್ಬರೂ ರಾಜಿ ಮಾಡಿಕೊಂಡಿದ್ದಾರೆ. ಆ ಪ್ರಕಾರ ಮುಲಾಯಂ ಸಿಂಗ್ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾಗಿರಲಿದ್ದಾರೆ. ಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ತಿಳಿದು ಬಂದಿದೆ. 

ರಾಜಿ ಸಂಧಾನದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಟಿಕೆಟ್ ಹಂಚಿಕೆ ವಿಚಾರವಾಗಿ ಅಖಿಲೇಶ್ ಮತ್ತು ಮುಲಾಯಂ ಸಿಂಗ್ ಒಟ್ಟಾಗಿ ನಿರ್ಧರಿಸಲಿದ್ದಾರೆ.

ನಿನ್ನೆ ನವದೆಹಲಿಯಲ್ಲಿ ಮುಲಯಾಂ ಸಿಂಗ್ ಮತ್ತು ಶಿವಪಾಲ್ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಇಂದು ಅಪ್ಪ ಮಗ ರಾಜಿ ಸಂಧಾನ ಮಾಡಿಕೊಂಡಿದ್ದಾರೆ. ಸದ್ಯ ಯಾದವೀ ಕಲಹ ಅಂತ್ಯಗೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!