
ಬೆಂಗಳೂರು(ಮೇ.17): ಜೆಡಿಯು ಮಂಡ್ಯ ಜಿಲ್ಲಾಧ್ಯಕ್ಷ ಬಿ.ಎಸ್. ಗೌಡ ಅವರು ಅಂಬರೀಶ್ ಅವರ ಶಾಸಕ ಸ್ಥಾನವನ್ನು ರದ್ದುಪಡಿಸುವಂತೆ ವಿಧಾನಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿರುವ ಹಿನ್ನಲೆಯಲ್ಲಿ ಸ್ಪೀಕರ್ ಕೆ.ಬಿ. ಕೋಳಿವಾಡ ಅವರು ಸ್ಪಷ್ಟನೆ ನೀಡುವಂತೆ ರೆಬಲ್'ಸ್ಟಾರ್ ಅವರಿಗೆ ಪತ್ರ ಬರೆದಿದ್ದಾರೆ.
ಜೆಡಿಯು ಮಂಡ್ಯ ಜಿಲ್ಲಾಧ್ಯಕ್ಷ ಬಿ.ಎಸ್. ಗೌಡ ಅವರು ಅಳೆದ ತಿಂಗಳು ಸ್ಪೀಕರ್ ಅವರಿಗೆ ಪತ್ರ ಬರೆದು ' ಅಂಬರೀಶ್ ಅವರು ಸಚಿವ ಸ್ಥಾನದಿಂದ ಕೆಳಗಿಳಿದ ನಂತರ ಯಾವುದೇ ಸದನ ಕಲಾಪಗಳಿಗೆ ಭಾಗಿಯಾಗಿಲ್ಲ. ಮೂರಕ್ಕೂ ಹೆಚ್ಚು ಸ್ಥಾನಗಳಿಗೆ ಗೈರು ಹಾಜರಾದರೆ ಅಂತಹವರ ಶಾಸಕ ಸ್ಥಾನವನ್ನು ರದ್ದು ಪಡಿಸುವ ಹಕ್ಕು ಸ್ಪೀಕರ್ ಅವರಿಗಿದೆ. ಈ ಕಾರಣದಿಂದ ಅಂಬರೀಶ್ ಅವರ ಸಚಿವ ಸ್ಥಾನವನ್ನು ರದ್ದುಪಡಿಸುವಂತೆ ಪತ್ರ ಬರೆದ ಕಾರಣದಿಂದ ಸ್ಪೀಕರ್ ಅಂಬಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.