JDS ಮೂವರು ಅತೃಪ್ತ ಶಾಸಕರು ಅನರ್ಹ?

Published : Jul 27, 2019, 08:50 AM ISTUpdated : Jul 27, 2019, 08:58 AM IST
JDS ಮೂವರು ಅತೃಪ್ತ ಶಾಸಕರು ಅನರ್ಹ?

ಸಾರಾಂಶ

ಶೀಘ್ರದಲ್ಲೇ ಮೂವರು ಜೆಡಿಎಸ್ ಶಾಸಕರನ್ನು ಅನರ್ಹ ಮಾಡುವ ಸಾಧ್ಯತೆ ಹೆಚ್ಚಿದೆ. ಬಿ ಎಸ್ ವೈ ವಿಶ್ವಾಸಮತಕ್ಕೂ ಮುನ್ನವೇ ಈ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ. 

ಬೆಂಗಳೂರು [ಜು.27]:  ಪಕ್ಷೇತರ ಶಂಕರ್ ಹಾಗೂ ಕಾಂಗ್ರೆಸ್‌ನ ಇಬ್ಬರು ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್‌ಕುಮಾರ್ ಶೀಘ್ರವೇ ಅತೃಪ್ತರ ತಂಡದಲ್ಲಿರುವ ಜೆಡಿಎಸ್‌ನ ಮೂವರು ಶಾಸಕರನ್ನುಅನರ್ಹ ಮಾ ಡುವ ಸಾಧ್ಯತೆ ಕುರಿತು ರಾಜಕೀಯ
ವಲಯದಲ್ಲಿ ಚರ್ಚೆ ನಡೆದಿದೆ.

ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ವಿಶ್ವಾಸ ಮತ ಸಾಬೀತುಪಡಿಸುವ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮ ವಾರದಂದೇ ಸ್ಪೀಕರ್ ಅವರು ಜೆಡಿಎಸ್‌ನ ಶಾಸಕರಾದ ಮಹಾಲಕ್ಷ್ಮೀ ಬಡಾವಣೆಯ ಕೆ. ಗೋಪಾಲಯ್ಯ, ಹುಣಸೂರು ಶಾಸಕ ಎಚ್.ವಿಶ್ವನಾಥ್, ಕೆ.ಆರ್.ಪೇಟೆ ಶಾಸಕ ನಾರಾಯಣಗೌಡರನ್ನು ಅನರ್ಹ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

ರಾಜೀನಾಮೆ ಸಲ್ಲಿಸಿರುವ ಈ ಶಾಸಕರು ವಿಪ್ ಉಲ್ಲಂಘನೆ ಮಾಡಿದ್ದಾರೆ ಎಂದು ಜೆಡಿಎಸ್ ದೂರು ನೀಡಿದೆ. ಈ ಬಗ್ಗೆ ಜೆಡಿಎಸ್ ನೀಡಿರುವ ಸಾಕ್ಷ್ಯಾಧಾರಗಳನ್ನು ಸ್ಪೀಕರ್ ಪರಿಶೀಲಿಸಿದ್ದು,  ಸೋಮವಾರ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!