ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ಮುಖಂಡರಿಗೆ ಢವ ಢವ

Published : Mar 09, 2019, 09:14 AM IST
ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ಮುಖಂಡರಿಗೆ ಢವ ಢವ

ಸಾರಾಂಶ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಅತೃಪ್ತ ಮುಖಂಡರ ಎದೆಯಲ್ಲಿ ಇದೀಗ ಢವ ಢವ ಆರಂಭವಾಗಿದೆ. ಖುದ್ದು ಹಾಜರಾಗಿ ತಮ್ಮ ನಡೆ ಬಗ್ಗೆ ವಿವರಣೆ ನೀಡಲು ಸೂಚಿಸಲಾಗಿದೆ. 

ಬೆಂಗಳೂರು :  ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ಶಾಸಕ ಉಮೇಶ್ ಜಾಧವ್ ಸೇರಿದಂತೆ ನಾಲ್ಕು ಮಂದಿ ಬಂಡಾಯ ಕಾಂಗ್ರೆಸ್ ಶಾಸಕರಿಗೆ ಮಾ. 12ರ ಮಧ್ಯಾಹ್ನ 3 ಗಂಟೆಗೆ ಖುದ್ದು ಆಗಮಿಸಿ ತಮ್ಮ ವಿರುದ್ಧದ ಪಕ್ಷಾಂತರ ಕಾಯ್ದೆ ಉಲ್ಲಂಘನೆ ಕುರಿತ ದೂರಿನ ಕುರಿತು ವಿವರಣೆ ನೀಡುವಂತೆ ಸ್ಪೀಕರ್ ರಮೇಶ್ ಕುಮಾರ್ ನಿರ್ದೇಶಿಸಿದ್ದಾರೆ. 

ಹೀಗಾಗಿ ರಾಜೀನಾಮೆ ನೀಡಿ ಅನರ್ಹತೆಯಿಂದ ಪಾರಾಗುವ ಉಮೇಶ್ ಜಾಧವ್‌ಗೆ ಢವಢವ ಆರಂಭವಾಗಿದೆ.  ಸುದ್ದಿಗಾರರ ಜತೆ ಮಾತನಾಡಿದ ರಮೇಶ್ ಕುಮಾರ್ ಅವರು, ‘4 ಮಂದಿ ಶಾಸಕರಿಗೆ ಪತ್ರ ಬರೆದಿದ್ದು, ಶುಕ್ರವಾರ ಖುದ್ದಾಗಿ ಆಗಮಿಸಿ ವಿವರಣೆ ನೀಡುವಂತೆ ಸೂಚಿಸಿರುವೆ’ ಎಂದು  ಹೇಳಿದರು.

‘ಪಕ್ಷಾಂತರ ನಿಷೇಧ ಕಾಯಿದೆ ಅಡಿ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು, ನಾಲ್ಕು ಮಂದಿ ಶಾಸಕರ ವಿರುದ್ದ ದೂರು ನೀಡಿದ್ದರು. ದೂರಿನ ಸಂಬಂಧ ಶಾಸಕರು ಸ್ಪಷ್ಟೀಕರಣ ನೀಡಿದ್ದಾರೆ. ಈ ಬಗ್ಗೆ ಮತ್ತಷ್ಟು ಸ್ಪಷ್ಟನೆ ಬಯಸಿ ಮತ್ತೊಂದು ನೋಟಿಸ್ ನೀಡಿದ್ದೇನೆ. ಇದಕ್ಕೆ ವಿವರಣೆ ನೀಡಲು ಮಾ.12 ರಂದು ಖುದ್ದು ಹಾಜರಾಗುವಂತೆ ಸೂಚಿಸಿ ದ್ದೇನೆ’ ಎಂದರು.

‘ವಿಚಾರಣೆ ಬಳಿಕ ಕಾನೂನು ಹೇಗೆ ಹೇಳುತ್ತೋ ಹಾಗೆ ಮಾಡುತ್ತೇವೆ. ರೂಲ್ಸ್ ಬುಕ್ ಏನು ಹೇಳುತ್ತೋ ಹಾಗೆ ಮಾಡಬೇಕಾಗುತ್ತದೆ. ಶಾಸಕರು ತಮ್ಮ ಸ್ಪಷ್ಟನೆಗಳನ್ನು ನೀಡಿದ ಬಳಿಕವಷ್ಟೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!