ಸ್ಪೀಕರ್ ರಮೇಶ್ ಕುಮಾರ್ ಶಾಸಕರಿಗೆ ಪಾಠ ಮಾಡಿದ್ದು ಯಾಕೆ?

Published : Jul 02, 2018, 08:40 PM ISTUpdated : Jul 02, 2018, 08:44 PM IST
ಸ್ಪೀಕರ್ ರಮೇಶ್ ಕುಮಾರ್ ಶಾಸಕರಿಗೆ ಪಾಠ ಮಾಡಿದ್ದು ಯಾಕೆ?

ಸಾರಾಂಶ

ವಿಧಾನಸೌಧದಲ್ಲಿಯೂ ಶಿಸ್ತು ತರಲು ಮುಂದಾಗಿರುವ ಸ್ಪೀಕರ್ ರಮೇಶ್ ಕುಮಾರ್ ಬಜೆಟ್ ಅಧಿವೇಶನದ ಆರಂಭದ ದಿನ ಪಕ್ಕಾ ಮೇಸ್ಟ್ರಾಗಿದ್ದರು. ಶಾಸಕರಿಗೆ ಪಾಠ ಮಾಡಿದ ರಮೇಶ್ ಕುಮಾರ್ ಸದನದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂದು ತಿಳಿಹೇಳಿದರು.

ಬೆಂಗಳೂರು[ಜು.2]  ಶಾಸಕರಲ್ಲಿ ಶಿಸ್ತು ತರಲು ಸ್ಪೀಕರ್ ರಮೇಶ್ ಕುಮಾರ್ ಮುಂದಾಗಿದ್ದಾರೆ, ಮೈತ್ರಿ ಸರ್ಕಾರದ ಜಂಟಿ ಅಧಿವೇಶನ ದ ಮೊದಲ ದಿನವೇ ಶಾಸಕರಿಗೆ ಹೆಡ್ ಮಾಸ್ಟರ್ ರೀತಿಯಲ್ಲಿ ಪಾಠ ಮಾಡಿದ್ದಾರೆ.

ಅಧಿವೇಶನ ಆರಂಭವಾಗುವ ಸಮಯಕ್ಕೆ ಸರಿಯಾಗಿ ಎಲ್ಲ ಶಾಸಕರು ಹಾಜರಿರಬೇಕು, ಸಾಕಷ್ಟು ಜನ ಹೊಸದಾಗಿ ಆಯ್ಕೆ ಆಗಿದ್ದೀರಿ. ಹಾಗಾಗಿ ಈಗ ಮನವಿ ಮಾಡ್ತಿದ್ದೇನೆ, ನಂತರ ಆದೇಶ ಮಾಡಬೇಕಾಗುತ್ತದೆ ಎಂದು ರಮೇಶ್ ಕಮಾರ್ ಪಕ್ಕಾ ಮೇಸ್ಟ್ರಂತೆ ಪಾಠ ಮಾಡಿದರು.

ಸದನ ನಡೆಯುವ ವೇಳೆಯಲ್ಲಿ ಮುಖ್ಯಮಂತ್ರಿಗಳ ಬಳಿ ಬಂದು ಅರ್ಜಿ ಹಿಡಿದು ನಿಲ್ಲಬೇಡಿ. ಇದರಿಂದ ಮುಖ್ಯಮಂತ್ರಿಗಳು ಮುಜುಗರಕ್ಕೆ ಒಳಗಾಗುತ್ತಾರೆ, ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಇಂತಹ ಸನ್ನಿವೇಶ ನಡೆಯುತ್ತಿದ್ದುದ್ದನ್ನು ನೋಡಿದ್ದೇನೆ. ಇಂಥ ವಿಚಾರಗಳು ಪುನರಾವರ್ತನೆಯಾದರೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru New Year 2026: ಎಂಜಿ ರೋಡ್ ಬಿಟ್ಟು ಕೋರಮಂಗಲಕ್ಕೆ ಜನಸಾಗರ; ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಜೊತೆ ಟೋಯಿಂಗ್ ಚಾಲಕನ ಕಿರಿಕ್!
ಹೊಸ ವರ್ಷಕ್ಕೆ ಕೆಲವೇ ಹೊತ್ತಲ್ಲಿ ಶಾಕ್! ಕೊಳ್ಳೇಗಾಲದಲ್ಲಿ ಭೀಕರ ಅಗ್ನಿ ಅವಘಡ; ಬೇಕರಿ ಸೇರಿದಂತೆ ಮೂರು ಅಂಗಡಿಗಳು ಭಸ್ಮ!