ಕಾನೂನು ಆದಾಗ ಗರಂ: ಆ.26ರ ವರೆಗೆ ಸಿಬಿಐ ಕಸ್ಟಡಿಗೆ ಚಿದಂಬರಂ!

Published : Aug 22, 2019, 07:08 PM ISTUpdated : Aug 22, 2019, 07:14 PM IST
ಕಾನೂನು ಆದಾಗ ಗರಂ: ಆ.26ರ ವರೆಗೆ ಸಿಬಿಐ ಕಸ್ಟಡಿಗೆ ಚಿದಂಬರಂ!

ಸಾರಾಂಶ

INX ಮಿಡಿಯಾ ಹೌಸ್ ಪ್ರಕರಣ ಹಿನ್ನೆಲೆ| ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿಗೆ| ಸಿಬಿಐ ಕಸ್ಟಡಿಗೆ ವಹಿಸಿ ಆದೇಶ ನೀಡಿದ ಸಿಬಿಐ ವಿಶೇಷ ನ್ಯಾಯಾಲಯ| ಆ.26ರವೆರೆಗೆ ಸಿಬಿಐ ಕಸ್ಟಡಿಗೆ ಪಿ.ಚಿದಂಬರಂ| 30 ನಿಮಿಷಗಳ ಕಾಲ ಸಂಬಂಧಿಕರು ಹಾಗೂ ವಕೀಲರ ಭೇಟಿಗೆ ಸಮ್ಮತಿ|

ನವದೆಹಲಿ(ಆ.22): ಮಹತ್ವದ ಬೆಳವಣಿಗೆಯೊಂದರಲ್ಲಿ INX ಮಿಡಿಯಾ ಹೌಸ್ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಆ.26ರವರೆಗೆ ಕಸ್ಟಡಿಗೆ ಪಡೆಯುವಲ್ಲಿ ಸಿಬಿಐ ಯಶಸ್ವಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ಮತ್ತು ಕಕ್ಷಿದಾರರ ವಾದ ಆಲಿಸಿದ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ, ಚಿದಂಬರಂ ಅವರನ್ನು 5 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ತೀರ್ಪು ನೀಡಿತು.

ಇದೇ ವೇಳೆ ಕಕ್ಷಿದಾರರ ಪರ ವಾದ ಮಂಡಿಸಿದ ವಕೀಲರದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ, ಚಿದಂಬರಂ ಅವರನ್ನು ಬಿಡುಗಡೆಗೊಳಿಸುವಂತೆ ಮಾಡಿದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತು.

ಆದರೆ ದಿನಕ್ಕೆ 30 ನಿಮಿಷಗಳ ಕಾಲ ಸಂಬಂಧಿಕರು ಹಾಗೂ ಕಕ್ಷಿದಾರ ಪರ ವಕೀಲರ ಭೇಟಿಗೆ ಸಿಬಿಐ ನ್ಯಾಯಾಲಯ ಸಮ್ಮತಿ ನೀಡಿದೆ. 

ನ್ಯಾಯಾಲಯದ ತೀರ್ಪು ಹೊರ ಬೀಳುತ್ತಿದ್ದಂತೇ, ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು