
ಲಕ್ನೋ (ಮೇ. 21): ಬಾಬರೀ ಮಸೀದಿ ಧ್ವಂಸ ಪ್ರಕರಣಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು 5 ಮಂದಿ ಆರೋಪಿಗಳಿಗೆ ಜಾಮೀನು ನೀಡಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಬಾಬರೀ ಮಸಿದಿ ದ್ವಂಸ ಪ್ರಕರಣವನ್ನು ಪ್ರತಿ ನಿತ್ಯ ವಿಚಾರಣೆ ನಡೆಸಲು ಆರಂಭಿಸಿರುವ ವಿಶೇಷ ಸಿಬಿಐ ನ್ಯಾಯಾಲಯವು 5 ಮಂದಿ ವಿಶ್ವ ಹಿಂದೂ ಪರಿಷತ್ ನಾಯಕರಿಗೆ ಜಾಮೀನು ನೀಡಿದೆ.
ಧ್ವಂಸ ಪ್ರಕರಣವನ್ನು ಒಂದು ತಿಂಗಳಿನೊಳಗೆ ಪ್ರತಿದಿನ ವಿಚಾರಣೆ ನಡೆಸಿ, ಎರಡು ವರ್ಷಗಳೊಳಗೆ ಅಂತಿಮ ತೀರ್ಪನ್ನು ನೀಡುವಂತೆ ಕಳೆದ ಏ.19ರಂದು ಸುಪ್ರೀಂ ಕೋರ್ಟ್ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸೂಚಿಸಿತ್ತು.
ಬಳಿಕ ಆರು ಮಂದಿ ಅರೋಪಿಗಳಿಗೆ ವಿಶೇಷ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿತ್ತು. ಅವರ ಪೈಕಿ 5 ಮಂದಿ ನ್ಯಾಯಾಲಯದಲ್ಲಿ ಹಾಜರಾಗಿ ಜಾಮೀನಿಗೆ ಮನವಿ ಮಾಡಿದ್ದರು. ಮುಂದಿನ ವಿಚಾರಣೆಯನ್ನು ಸೋಮವಾರದಂದು (ಮೇ.22) ನಿಗದಿಪಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.