
ಬೆಂಗಳೂರು[ಜೂ. 25] ಜಲಸಂಪನ್ಮೂಲ ಸಚಿವ, ಕರ್ನಾಟಕ ದೋಸ್ತಿ ಸರಕಾರದ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರಿಗೆ ಟ್ರಬಲ್ ಶುರುವಾಗಿದೆ.
ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಂಗಳವಾರದ ಆದೇಶ ಡಿಕೆಶಿ ಆತಂಕಕ್ಕೆ ಮೂಲ ಕಾರಣ. ಹವಾಲ, ಹೈಕಮಾಂಡ್ ಕಪ್ಪ, ತೆರಿಗೆ ವಂಚನೆ ಆರೋಪದಿಂದ ತಮ್ಮನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
'ಡಿಕೆಶಿ ಎಲ್ಲಿದ್ದೀಯಪ್ಪಾ ಎನ್ನುತ್ತಾರೆ ಬಳ್ಳಾರಿ ಜನ'
ಯಾವ ಪ್ರಕರಣ?: 3 ಪ್ರಕರಣಗಳಿಂದ ಮುಕ್ತರಾಗಿದ್ದ ಡಿಕೆಶಿಗೆ 4ನೇ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ. ಪ್ರಕರಣದಿಂದ ಡಿಕೆಶಿ ಹೆಸರು ಕೈಬಿಡಲು ನ್ಯಾಯಾಧೀಶ ರಾಮಚಂದ್ರ ಹುದ್ದರ್ ನಿರಾಕರಿಸಿದ್ದಾರೆ. ಹಾಗಾಗಿ ಡಿಕೆಶಿ ಮೇಲಿನ ಪ್ರಕರಣದ ವಿಚಾರಣೆ ಮುಂದುವರಿಯಲಿದೆ.
ಡಿ.ಕೆ.ಶಿವಕುಮಾರ್ ದೆಹಲಿ ಫ್ಲ್ಯಾಟ್ ನಲ್ಲಿ ಸಿಕ್ಕಿದ್ದ ಹಣ ಸಂಕಷ್ಟ ತಂದಿದೆ. ಐಟಿ ಇಲಾಖೆ ದಾಖಲಿಸಿದ್ದ ನಾಲ್ಕನೇ ಪ್ರಕರಣ ಡಿಕೆಶಿಗೆ ಸುತ್ತಿಕೊಂಡಿದೆ. ಆಗಸ್ಟ್ 2017 ರಲ್ಲಿ ಡಿಕೆಶಿಗೆ ಸಂಬಂಧಿಸಿದ್ದ ವಿವಿಧ ಆಸ್ತಿಗಳ ಮೇಲೆ ದಾಳಿ ನಡೆಸಿದ್ದ ಐಟಿ ಇಲಾಖೆ ಪ್ರಕರಣ ದಾಖಲಿಸಿಕೊಂಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.