ಕುಮಾರಸ್ವಾಮಿಗೆ ಭೂಕಂಟಕ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

Published : Sep 05, 2019, 02:17 PM ISTUpdated : Sep 05, 2019, 05:19 PM IST
ಕುಮಾರಸ್ವಾಮಿಗೆ ಭೂಕಂಟಕ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿಗೆ ಭೂಕಂಟಕ| 2006ರಲ್ಲಿ ವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್.

ಬೆಂಗಳೂರು, (ಸೆ.05):  ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರಿಗೆ ಭೂಕಂಟಕ ಎದುರಾಗಿದ್ದು, ಬೆಂಗಳೂರು ಹೊರಲಯದ ವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಗುರುವಾರ) ಸಮನ್ಸ್​ ನೀಡಿದೆ.

ಅಕ್ಟೋಬರ್ 4 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ನೀಡಿದೆ. 2006ರಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಬನಶಂಕರಿ 5ನೇ ಸ್ಟೇಜ್​ನಲ್ಲಿರುವ ವಡೇರಹಳ್ಳಿಯಲ್ಲಿ 2 ಎಕರೆ 24 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು 2012 ರಲ್ಲಿ ದೂರು ದಾಖಲಾಗಿತ್ತು. 

ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವರು ದೂರು ದಾಖಲಿಸಿದ್ದರು. ಪ್ರಕರಣ ಕುರಿತು ನ್ಯಾಯಾಲಯ ತನಿಖೆಗೂ ಆದೇಶಿಸಿತ್ತು. 6 ತಿಂಗಳ ಹಿಂದೆ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದರು.

 ಇದನ್ನು ಪ್ರಶ್ನಿಸಿ ಮಹದೇವಸ್ವಾಮಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಿಂದ ಸುಮ್ಮನಿದ್ದು ಆರು ತಿಂಗಳ ಹಿಂದೆ ಬಿ.ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದರು. 

ಇದೀಗ ಪ್ರಕರಣದ ಮರುತನಿಖೆಗೆ ಲೋಕಾಯುಕ್ತ ನ್ಯಾಯಾಧೀಶ ರಾಮಚಂದ್ರ ಡಿ. ಉಡಿಗಾರ್ ಅವರು ಆದೇಶ ನೀಡಿದ್ದು, ಇದೀಗ ವಿಚಾರಣೆಗೆ ಹಾಜರಾಗುವಂತೆ ಎಚ್​ಡಿಕೆಗೆ ಸಮನ್ಸ್ ನೀಡಲಾಗಿದೆ

ಸೆ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಆಗಿ ಮತಾಂತರವಾದ್ರಾ ಬಾಲಿವುಡ್‌ನ ಪ್ರಖ್ಯಾತ ನಟಿಯ ಸಹೋದರಿ? ಬುರ್ಖಾ, ಹಿಜಾಬ್‌ ಧರಿಸಿ ಮಸೀದಿ ಪ್ರವೇಶ!
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!