ಸಿದ್ದರಾಮಯ್ಯಗೆ ಸಂಕಷ್ಟ: ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್

By Web DeskFirst Published Aug 23, 2019, 9:47 PM IST
Highlights

ಮೈತ್ರಿ ಸರ್ಕಾರ ಪತನದ ವಿಚಾರಕ್ಕೆ ದೇವೇಗೌಡ ಹಾಗೂ ಸಿದ್ದರಾಮಯ್ಯ ನಡುವೆ ವಾಕ್ಸಮರ ನಡೆದಿದೆ. ದೇವೇಗೌಡರು ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಈ ರಾಜಕೀಯ ತಿಕ್ಕಾಟ ಮಧ್ಯೆ ಸಿದ್ದರಾಮಯ್ಯಗೆ ಮತ್ತೆ ಎದುರಾಯ್ತು ಭೂ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ.

ಬೆಂಗಳೂರು, [ಆ.23]: ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ.

ಸಿದ್ದರಾಮಯ್ಯ ಹಾಗೂ ಇತರರಿಗೆ ಇದೇ ಸೆಪ್ಟೆಂಬರ್ 23ಕ್ಕೆ ಕೋರ್ಟ್ ಗೆ ಹಾಜರಾಗುವಂತೆ ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಇಂದು [ಶುಕ್ರವಾರ] ಸಮನ್ಸ್ ನೀಡಿದೆ. 

1997ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಮೈಸೂರಿನ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಆಗಿದ್ದ 10 ಗುಂಟೆ ಜಮೀನು ಖರೀದಿಸಿದ್ದರು. ನಂತರ 2003ರಲ್ಲಿ ಮನೆ ನಿರ್ಮಾಣ ಮಾಡಿ ಮಾರಾಟ ಮಾಡಿದ್ದರು.

ಈ ಪ್ರಕರಣವನ್ನು ಮೈಸೂರಿನ ಲಕ್ಷ್ಮಿಪುರಂ ಪೊಲೀಸರ ಬಿ ರಿಪೋರ್ಟ್ ಹಾಕಿದ್ದರು. ಆದ್ರೆ ಇದೀಗ ಜನಪ್ರತಿನಿಧಿಗಳ ಕೋರ್ಟ್, ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ತಿರಸ್ಕಾರ ಮಾಡಿದ್ದು, ವಿಚಾರಣೆಗೆ ಅಸ್ತು ಎಂದಿದೆ.

ಈ ಮೂಲಕ ಸಿದ್ದರಾಮಯ್ಯಗೆ ಮತ್ತೆ ಭೂ ಸಂಕಷ್ಟ ಎದುರಾಗಿದೆ.

click me!