
ನವದೆಹಲಿ: ಶಾಸಕ ಹಾಗೂ ಸಂಸದರ ವಿರುದ್ಧ ದಾಖಲಾಗಿರುವ ಗಂಭೀರ ಅಪರಾಧ ಪ್ರಕರಣಗಳ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರವು ಹೇಳಿದೆ.
ಗಂಭೀರ ಅಪರಾಧ ಪ್ರಕರಣಗಳಲ್ಲಿ ದೋಷಿಯೆಂದು ಸಾಬೀತಾಗಿರುವ ಶಾಸಕರು ಹಾಗೂ ಸಂಸದರ ವಿಚಾರಣೆ ನಡೆಸಲು ದೇಶದ ವಿವಿದೆಡೆ 12 ವಿಶೇಷ ಕೋರ್ಟ್’ಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರವು ಇಂದು ಸುಪ್ರೀಂ ಕೋರ್ಟಿನಲ್ಲಿ ಅಫಿಡಾವಿಟ್ ಸಲ್ಲಿಸಿದೆ.
ಅಪರಾಧ ಪ್ರಕರಣಗಳಲ್ಲಿ ದೋಷಿಯೆಂದು ಸಾಬೀತಾಗಿರುವ ಶಾಸಕರು ಹಾಗೂ ಸಂಸದರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಜೀವಾವಧಿ ನಿಷೇಧ ಹೇರುವ ಬಗ್ಗೆ ಸಲ್ಲಿಸಲಾದ ಸಾರ್ಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.