
ಕೊಚ್ಚಿ (ಅ.07): ಕೇರಳದಲ್ಲಿ ನಿಮಗೆ ಬೀದಿನಾಯಿಗಳನ್ನು ಹೊಡೆದುರುಳಿಸಬೇಕೆಂದಿದ್ದರೆ ಅಥವಾ ಬೀದಿ ನಾಯಿ ಕೊಂದ ಆರೋಪ ನಿಮ್ಮ ಮೇಲಿದ್ದರೆ, ನಿಮಗೆ ಏರ್’ಗನ್’ಗಳು ರಿಯಾಯಿತಿ ದರದಲ್ಲಿ ಒದಗಿಸಲು ಸಂಘಟನೆಯೊಂದು ಮುಂದೆ ಬಂದಿದೆ.
ಕೇರಳದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು ಈವರೆಗೆ ಕೊಟ್ಟಾಯಂ ಜಿಲ್ಲೆಯಲ್ಲೇ 30 ಬೀದಿನಾಯಿಗಳನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ, ಸಂತ ಥಾಮಸ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು, ಬೀದಿನಾಯಿಗಳ ಹಾವಳಿಯಿಂದ ಬೇಸತ್ತವರಿಗೆ ಏರ್’ಗನ್ ಖರೀದಿಸಲು ಶೇ.10 ರಿಯಾಯಿತಿ ನೀಡುವುದಾಗಿ ಘೋಷಿಸಿದೆ.
ಆದರೆ ರಿಯಾಯಿತಿ ಪಡೆಯಲು ಬಯಸುವವನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕನಿಷ್ಠ ಒಂದು ಪ್ರಕರಣ ದಾಖಲಾಗಿರಬೇಕಂತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.