ತೆಂಗು, ಅಡಿಕೆಗೆ ವಿಶೇಷ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ

Published : Feb 08, 2018, 10:58 AM ISTUpdated : Apr 11, 2018, 12:43 PM IST
ತೆಂಗು, ಅಡಿಕೆಗೆ ವಿಶೇಷ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ

ಸಾರಾಂಶ

ರಾಜ್ಯದಲ್ಲಿ ಅಂತರ್ಜಲ ಕುಸಿತದಿಂದ 44 ಲಕ್ಷ ತೆಂಗಿನ ಮರಗಳು ನಾಶವಾಗಿ ಸುಮಾರು 4,500 ಕೋಟಿ ರು.ಗಳಷ್ಟು ಆರ್ಥಿಕ ನಷ್ಟ ಉಂಟಾಗಿದೆ.

ವಿಧಾನಸಭೆ: ರಾಜ್ಯದಲ್ಲಿ ಅಂತರ್ಜಲ ಕುಸಿತದಿಂದ 44 ಲಕ್ಷ ತೆಂಗಿನ ಮರಗಳು ನಾಶವಾಗಿ ಸುಮಾರು 4,500 ಕೋಟಿ ರು.ಗಳಷ್ಟು ಆರ್ಥಿಕ ನಷ್ಟ ಉಂಟಾಗಿದೆ.  ಆದರೆ ಪ್ರತಿ ತೆಂಗಿನ ಮರಕ್ಕೆ 8 ಸಾವಿರ ರು. ಪರಿಹಾರ ಪ್ಯಾಕೇಜ್ ನೀಡಲು ಸಾಧ್ಯವಿಲ್ಲ. ಪ್ರತಿ ಹೆಕ್ಟೇರ್ ತೆಂಗಿಗೆ 50 ಸಾವಿರ ರು. ಹಾಗೂ ಅಡಿಕೆಗೆ 1.87 ಲಕ್ಷ ರು.ಗಳಂತೆ ಒಟ್ಟು 2,477 ಕೋಟಿ ರು. ಗಳ ವಿಶೇಷ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ವಿಧಾನಸಭೆಯಲ್ಲಿ ಬುಧವಾರ ಜೆಡಿಎಸ್ ಶಾಸಕ ಎಂ.ಕೆ. ಶಿವಲಿಂಗೇಗೌಡ ಮತ್ತಿತರರು ನೀಡಿದ್ದ ಸೂಚನೆ ಮೇರೆಗೆ ನಡೆದ ಚರ್ಚೆ ಬಳಿಕ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ನೀಡಿರುವ ಉತ್ತರವನ್ನು ಸದನದಲ್ಲಿ ಮಂಡಿಸಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಈ ವಿಷಯ ತಿಳಿಸಿದರು.

ಕಡಲೆ ಖರೀದಿ ಷರತ್ತು ಸಡಿಲಿಕೆಗೆ ಪರಿಶೀಲನೆ: ರಾಜ್ಯದಲ್ಲಿ ಪ್ರತಿ ಕ್ವಿಂಟಲ್ ಗೆ 3,700 ರು. ದರದಲ್ಲಿ ಕಡಲೆ ಖರೀದಿಗಾಗಿ ಖರೀದಿ ಕೇಂದ್ರ ಆರಂಭಿಸಿರುವ ರಾಜ್ಯ ಸರ್ಕಾರ, ಖರೀದಿ ಮೇಲೆ ವಿಧಿಸಿರುವ ಷರತ್ತುಗಳನ್ನು ಸಡಿಲಿಸುವ ಸಂಬಂಧ ಒಂದೆರಡು ದಿನಗಳಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು. ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಮತ್ತಿತರರ ಪ್ರಸ್ತಾಪಕ್ಕೆ ಅವರು ಉತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಪಾಕಿಸ್ತಾನಿ ನಾಯಕನ ಹೆಸರಿನಲ್ಲಿ ಮುಂಬೈನಲ್ಲಿ ಇನ್ನೂ ಇದೆ 2.5 ಎಕರೆಯ ಬೃಹತ್ ಬಂಗ್ಲೆ
ಸ್ಯಾಂಡಲ್‌ವುಡ್ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌ ಹಾಕಿದ್ದ ಅಕ್ರಮ ಕಾಂಪೌಂಡ್ ತೆರವು