ಮೋದಿ ಕಂಟಕ ನಿವಾರಿಸಲು ಚಂಡಿಕಾ ಯಾಗ

Published : Jan 01, 2017, 11:46 PM ISTUpdated : Apr 11, 2018, 12:42 PM IST
ಮೋದಿ ಕಂಟಕ ನಿವಾರಿಸಲು ಚಂಡಿಕಾ ಯಾಗ

ಸಾರಾಂಶ

ಕೆಂಗಣ್ಣಿಗೆ ಗುರಿಯಾಗಿರುವ ಪ್ರಧಾನಿ ಮೋದಿಗೆ, ಮುಂಬರುವ ವರ್ಷದಲ್ಲಿ ಕಂಟಕವಿದೆ ಎಂದು ಧಾರ್ಮಿಕ ಜ್ಯೋತಿಷಿಗಳು ಹೇಳುತ್ತಿದ್ದಾರೆ.

ಹೊಸ ವರ್ಷವನ್ನು ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ವಿಶೇಷ ರೀತಿಯಲ್ಲಿ ಸ್ವಾಗತಿಸಿದ್ದಾರೆ. ಕಾಳಧನಿಕರ ಕೆಂಗಣ್ಣಿಗೆ ಗುರಿಯಾಗಿರುವ ಪ್ರಧಾನಿ ಮೋದಿಗೆ, ಮುಂಬರುವ ವರ್ಷದಲ್ಲಿ ಕಂಟಕವಿದೆ ಎಂದು ಧಾರ್ಮಿಕ ಜ್ಯೋತಿಷಿಗಳು ಹೇಳುತ್ತಿದ್ದಾರೆ. ಹಾಗಾಗಿ ಕೊಲ್ಲೂರು ಕ್ಷೇತ್ರದಲ್ಲಿ ನವ ಚಂಡಿಕಾಯಾಗ ನಡೆಸಿದರು. ಮುಕಾಂಬಿಕೆಯ ಸನ್ನಿಧಿಯಲ್ಲಿ ನಡೆಯುವ ಚಂಡಿಕಾಯಾಗಕ್ಕೆ ವಿಶೇಷ ಮಹತ್ವ ಇದೆ. ಜಡ್ಕಲ್'ನಿಂದ ಪಾದಯಾತ್ರೆಯ ಮೂಲಕ ಕೊಲ್ಲೂರಿಗೆ ಬಂದ ಕಾರ್ಯಕರ್ತರು, ಪೂರ್ಣಾಹುತಿಯಲ್ಲಿ ಭಾಗಿಯಾದರು. ಸ್ಥಳೀಯ ಮುಖಂಡ ಹಾಗೂ ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಸುಕುಮಾರ ಶೆಟ್ಟಿ ಯಾಗದ ನೇತೃತ್ವ ವಹಿಸಿದ್ದರು. ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿಯವ್ರು ಮುಕಾಂಬಿಕಾ ಕ್ಷೇತ್ರಕ್ಕೆ ಬರುವಂತಾಗಲಿ ಎಂದು ಆಶಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!