ಬಿಜೆಪಿಯೊಂದಿಗೆ ಮೈತ್ರಿಗೆ ಜಗನ್ ಹೊಸ ಬೇಡಿಕೆ

Published : Jan 23, 2018, 08:51 AM ISTUpdated : Apr 11, 2018, 12:45 PM IST
ಬಿಜೆಪಿಯೊಂದಿಗೆ ಮೈತ್ರಿಗೆ ಜಗನ್ ಹೊಸ ಬೇಡಿಕೆ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಆಂಧ್ರದ ಅಭಿವೃದ್ಧಿಗಾಗಿ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ಸಿದ್ಧವಿದ್ದರೆ, ಬಿಜೆಪಿ ಜತೆಗಿನ ಮೈತ್ರಿಗೆ ಸಿದ್ಧ ಎಂದು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ಮೋಹನ್ ರೆಡ್ಡಿ ತಿಳಿಸಿದ್ದಾರೆ.

ತಿರುಪತಿ: ಪ್ರಧಾನಿ ನರೇಂದ್ರ ಮೋದಿ ಆಂಧ್ರದ ಅಭಿವೃದ್ಧಿಗಾಗಿ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ಸಿದ್ಧವಿದ್ದರೆ, ಬಿಜೆಪಿ ಜತೆಗಿನ ಮೈತ್ರಿಗೆ ಸಿದ್ಧ ಎಂದು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ಮೋಹನ್ ರೆಡ್ಡಿ ತಿಳಿಸಿದ್ದಾರೆ.

67 ದಿನಗಳ ಕಾಲ 900 ಕಿ.ಮೀ ಕಾಲ್ನಡಿಗೆಯ ಪ್ರಜಾ ಸಂಕಲ್ಪ ಯಾತ್ರೆಯನ್ನು ಸೋಮವಾರ ತಿರುಪತಿಯಲ್ಲಿ ಪೂರ್ಣಗೊಳಿಸಿದ ಜಗನ್‌ಮೋಹನ್ ಮಾತನಾಡಿ, ‘ಆಂಧ್ರಕ್ಕೆ ಕೇಂದ್ರ ಸರ್ಕಾರ ವಿಶೇಷ ಸ್ಥಾನಮಾನ ನೀಡಲು ಸಿದ್ಧವಿದ್ದರೆ, ನಾವು ಅವರ ಜತೆಗೆ ಹೋಗಲು ಬದ್ಧ’ ಎಂದು ಹೇಳಿದ್ದಾರೆ.

ಇದೇ ವೇಳೆ ಚಂದ್ರ ಬಾಬು ನಾಯ್ಡು ವಿರುದ್ಧ ವಾಗ್ದಾಳಿ ನಡೆಸಿದ ಜಗನ್, 70 ವರ್ಷ ಗಳ ಹಿಂದೆ ಕರ್ನಾಟಕದಲ್ಲಿ ಕೇವಲ 4 ವರ್ಷಗಳಲ್ಲಿ ಅತ್ಯಾಕರ್ಷಕ ವಿಧಾನಸೌಧ ನಿರ್ಮಿಸಲಾಯಿತು. ಆದರೆ ಆಂಧ್ರ ರಾಜಧಾನಿ ಅಮರಾವತಿ ನಿರ್ಮಾಣದ ಹೆಸರಲ್ಲಿ ನಾಯ್ಡು ಜನರನ್ನು ವಂಚಿಸುತ್ತಿದ್ದಾರೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ಕಾಯ್ದೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅತಿದೊಡ್ಡ ಬೆದರಿಕೆ: ಪಿ.ರಾಜೀವ್ ಲೇಖನ
ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗ ತಡೆಯಲು ದ್ವೇಷ ಭಾಷಣ ಕಾಯ್ದೆ ಅಗತ್ಯ: ರಮೇಶ್ ಬಾಬು ಲೇಖನ