ಕದಿರೇಶ್ ಹತ್ಯೆ: ತನಿಖೆಗೆ ವಿಶೇಷ ತಂಡ

Published : Feb 07, 2018, 09:47 PM ISTUpdated : Apr 11, 2018, 01:12 PM IST
ಕದಿರೇಶ್ ಹತ್ಯೆ: ತನಿಖೆಗೆ ವಿಶೇಷ ತಂಡ

ಸಾರಾಂಶ

ಕದಿರೇಶ್ ಕೊಲೆ ಆರೋಪಿಗಳಿಗಾಗಿ ವಿಶೇಷ ತಂಡ ಬೇರೆಯವರಂತೆ ಬೇಜಾವಾಬ್ದಾರಿ ಹೇಳಿಕೆಗಳನ್ನು ನೀಡಲ್ಲ

ಬೆಂಗಳೂರು: ಕದಿರೇಶ್ ಹತ್ಯೆಯ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಅವರು ಭೇಟಿ ನೀಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕದಿರೇಶ್ ಕೊಲೆ ಆರೋಪಿಗಳಿಗಾಗಿ ವಿಶೇಷ ತಂಡ ರಚಿಸಲಾಗಿದೆ. ಬೇರೆಯವರಂತೆ ಬೇಜಾವಾಬ್ದಾರಿ ಹೇಳಿಕೆಗಳನ್ನು ನೀಡಲ್ಲ, ಪ್ರಕರಣದ ತನಿಖೆಯಾಗುವವರೆಗೆ ಹೆಚ್ಚು ಮಾತನಾಡಲ್ಲ, ಎಂದು ರಾಮಲಿಂಗ ರೆಡ್ಡಿ ಹೇಳಿದ್ದಾರೆ.

ವಾರ್ಡ್ ನಂಬರ್ 138 ಛಲವಾದಿ ಪಾಳ್ಯರ ಕಾರ್ಪೋರೇಟರ್​ ರೇಖಾ ಪತಿ ಕದಿರೇಶನ್’ನನ್ನು ದುಷ್ಕರ್ಮಿಗಳು ಹಾಡುಹಗಲೇ ಕೊಚ್ಚಿ ಹತ್ಯೆ ಮಾಡಿದ್ದಾರೆ.

ಸಂಜೆ 4 ಗಂಟೆ ವೇಳೆಗೆ ಕಾಟನ್​ಪೇಟೆಯ ಅಂಜಿನಪ್ಪ ಗಾರ್ಡನ್​​ನಲ್ಲಿ ಕದಿರೇಶ್​ ಹತ್ಯೆ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಬೆಕ್ಕಿನ ಕಣ್ಣು ರಾಜೇಂದ್ರ ಸಹಚರರಿಂದ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಮೃತ ಕದಿರೇಶ್ ಕಾಟನ್​ಪೇಟೆಯಲ್ಲಿ 2002ರಲ್ಲೇ ರೌಡಿ ಶೀಟರ್ ಖಾತೆ ತೆರೆದಿದ್ದ. ಕದಿರೇಶ್​​ ವಿರುದ್ಧ ಹಲವಾರು ಶ್ರೀರಾಂಪುರ, ಕಾಟನ್​ಪೇಟೆ’ಗಳಲ್ಲಿ ಕೇಸ್’ಗಳು ದಾಖಲಾಗಿತ್ತು. ಒಟ್ಟು 15 ಪ್ರಕರಣಗಳಲ್ಲಿ ಕದಿರೇಶ್ ಆರೋಪಿಯಾಗಿದ್ದ ಎಂದು ಹೇಳಲಾಗಿದೆ.

ಕದಿರೇಶ್ ವಿರುದ್ಧದ 5 ಪ್ರಕರಣಗಳು ಖುಲಾಸೆಯಾಗಿದ್ದು, ಇನ್ನೂ 10 ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಕದಿರೇಶ್​​ ವಿರುದ್ಧ ಕೊಲೆ, ಕೊಲೆಯತ್ನ. ಹಲ್ಲೆ ಬೆದರಿಕೆ ದೂರುಗಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಳಿಗಾಲಕ್ಕಾಗಿಯೇ ವಿಶೇಷ ಬ್ರೇಕ್‌ಫಾಸ್ಟ್‌ ರೆಸಿಪಿ ತಿಳಿಸಿದ ಬಾಬಾ ರಾಮ್‌ದೇವ್‌, ಇದರಿಂದ ಇದೆ ಸಾಕಷ್ಟು ಪ್ರಯೋಜನ!
ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!