ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹಿರೇಮಠ್ ಹೊಸ ಬಾಂಬ್

Published : Oct 30, 2016, 10:55 AM ISTUpdated : Apr 11, 2018, 01:06 PM IST
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹಿರೇಮಠ್ ಹೊಸ ಬಾಂಬ್

ಸಾರಾಂಶ

ಬಿಡದಿ ಹೋಬಳಿಯ ಕಾಡಗೇನಹಳ್ಳಿಯಲ್ಲಿ ಸುಮಾರು 200 ಕೋಟಿ ರೂ ಮೌಲ್ಯದ ಭೂಮಿ ಕಬಳಿಕೆಯಾಗಿದ್ದು, ಇದರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಕೈವಾಡ ಸಹ ಇದೆ ಎಂದು ಹಿರೇಮಠ್ ಆರೋಪಿಸಿದ್ದಾರೆ.

ಹುಬ್ಬಳ್ಳಿ(ಅ. 30): ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಮತ್ತೆ ಆರೋಪ ಮಾಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ 200 ಎಕರೆ ಭೂಕಬಳಿಕೆಯಾಗಿದ್ದು, ಇದರಲ್ಲಿ 100 ಎಕರೆ ಜಾಗವು ಗೋಮಾಳಕ್ಕೆ ಸಂಬಂಧಿಸಿದ ಜಾಗವಾಗಿದೆ. ಈ ಜಾಗವನ್ನು ಹೆಚ್'ಡಿಕೆ ಹಾಗೂ ಹತ್ತಿರದ ಸಂಬಂಧಿ ಮದ್ದೂರು ಶಾಸಕ ಬಿ.ಸಿ.ತಮ್ಮಣ ಎಂಬುವರು ಅತಿಕ್ರಮಣ ಮಾಡಿದ್ದಾರೆ ಎಂದು ಹಿರೇಮಠ್ ಬಾಂಬ್ ಸಿಡಿಸಿದ್ದಾರೆ.

ಬಿಡದಿ ಹೋಬಳಿಯ ಕಾಡಗೇನಹಳ್ಳಿಯಲ್ಲಿ ಸುಮಾರು 200 ಕೋಟಿ ರೂ ಮೌಲ್ಯದ ಭೂಮಿ ಕಬಳಿಕೆಯಾಗಿದ್ದು, ಇದರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಕೈವಾಡ ಸಹ ಇದೆ ಎಂದು ಹಿರೇಮಠ್ ಆರೋಪಿಸಿದ್ದಾರೆ. ಜಿ.ಮಾದೆಗೌಡ ಈ ಬಗ್ಗೆ 2013ರಲ್ಲಿ ದಾಖಲೆ ಸಮೇತ ದೂರು ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗು ತಹಶೀಲ್ದಾರರಿಗೆ ದೂರು ನೀಡಲಾಗಿದೆ. ರಾಮನಗರ ಉಪವಿಭಾಗಧಿಕಾರಿಯು ಈ ಭೂಕಬಳಿಕೆ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ ಎಂಬ ಮಾಹಿತಿಯನ್ನು ಎಸ್ ಆರ್ ಹಿರೇಮಠ ಇಂದು ಪತ್ರಿಕಾಗೊಷ್ಠಿಯಲ್ಲಿ ಹೊರಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?