
ಚಾಮರಾಜನಗರ(ನ.26): `ನಾನು ಸಮುದ್ರದಲ್ಲಿ ಈಜಿ ಬಂದವನು, ನೀನು ಬಾವಿಯಲ್ಲಿ ವಟಗುಟ್ಟುವ ಕಪ್ಪೆ' ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ಏಕವಚನದಲ್ಲಿಯೇ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂತ್ರಿ ಮಂಡಲದಿಂದ ಕೈಬಿಟ್ಟ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸೆಟೆದು ನಿಂತಿರುವ ಮಾಜಿ ಕಂದಾಯ ಸಚಿವ ವಿ.ಶ್ರೀನಿವಾಸ್ ಪ್ರಸಾದ್, ಚಾಮರಾಜನಗರದಲ್ಲಿ ಸ್ವಾಭಿಮಾನ ಸಮಾವೇಶಕ್ಕೆ ಚಾಲನೆ ನೀಡಿ ಸಿಎಂ ವಿರುದ್ಧ ಹರಿಹಾಯ್ದರು.
`ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ಡೋಂಗಿ ಸಮಾಜವಾದಿ, ಕರ್ನಾಟಕದ ನಂ1 ಸುಳ್ಳುಗಾರ ರಾಜಕಾರಣಿ, ನಾನು ಸಮುದ್ರದಲ್ಲಿ ಈಜಿ ಬಂದವನು, ನೀನು ಬಾವಿಯಲ್ಲಿ ವಟಗುಟ್ಟುವ ಕಪ್ಪೆ ಎಂದು ಶ್ರೀನಿವಾಸ್ ಪ್ರಸಾದ್ ಆರೋಪಿಸಿದರು. ಸಿದ್ದರಾಮಯ್ಯನ ಇನ್ನೊಂದು ಮುಖ ಜನರಿಗೆ ಗೊತ್ತಿಲ್ಲ, ನಿನಗೆ ಕಮಿಟ್ ಮೆಂಟ್ ಇಲ್ಲ. ದಲಿತ ರಾಜಕಾರಣವನ್ನು ಧ್ವಂಸ ಮಾಡಲು ಸಿದ್ದರಾಮಯ್ಯ ಹುನ್ನಾರ ಮಾಡುತ್ತಿದ್ದಾನೆ ಎಂದು ಶ್ರೀನಿವಾಸ್ ಪ್ರಸಾದ್ ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.