
ಕೊಲಂಬೋ (ಡಿ. 04): ಪ್ರಧಾನಿ ಹುದ್ದೆಯ ಯಾವುದೇ ಕರ್ತವ್ಯ ನಿರ್ವಹಿಸದಂತೆ ಮಹಿಂದಾ ರಾಜಪಕ್ಸೆ ಅವರಿಗೆ ಶ್ರೀಲಂಕಾ ನ್ಯಾಯಾಲಯವೊಂದು ಸೂಚನೆ ನೀಡಿದೆ.
ಈ ಮೂಲಕ ಮಾಜಿ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ, ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾಗೆ ಮುಖಭಂಗವಾಗಿದೆ.
ಈ ಬಗ್ಗೆ ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಹಂಗಾಮಿ ಪ್ರಧಾನಿ ರಾಜಪಕ್ಸೆ ಹಾಗೂ ಅವರ ಸರ್ಕಾರದಲ್ಲಿರುವ ಯಾವುದೇ ಸಚಿವರು ತಮ್ಮ ಹುದ್ದೆಯನ್ನು ನಿರ್ವಹಿಸಬಾರದು ಎಂದು ಆದೇಶ ಹೊರಡಿಸಿದೆ. ಅಲ್ಲದೆ, ಈ ಕುರಿತಾದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 12 ಮತ್ತು 13ಕ್ಕೆ ನಿಗದಿಗೊಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.