
ಕೊಲಂಬೊ(ಮಾ.06): ಬೌದ್ಧರು ಹಾಗೂ ಮುಸ್ಲಿಮರ ನಡುವಿನ ಘರ್ಷಣೆಯಿಂದಾಗಿ ಶ್ರೀಲಂಕಾದಲ್ಲಿ 10 ದಿನಗಳ ಕಾಲ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಹಿಂದೂ ಮಹಾಸಾಗರ ದ್ವೀಪದ ಕೇಂದ್ರೀಯ ಜಿಲ್ಲೆ ಕ್ಯಾಂಡಿಯಲ್ಲಿ ನಿನ್ನೆ ಎರಡೂ ಸಮುದಾಯಗಳ ನಡುವೆ ಗಲಭೆ ವಿಪರೀತಕ್ಕೆ ಹೋದ ಕಾರಣ ತುರ್ತು ಪರಿಸ್ಥಿತಿ ಹೇರಲಾಗಿದೆ. ಕಳೆದ ಒಂದು ವರ್ಷದಿಂದ 2 ಸಮುದಾಯಗಳ ನಡುವೆ ಆಗಾಗ ಘರ್ಷಣೆ ಸಂಭವಿಸುತ್ತಿತ್ತು ನಿನ್ನೆ ತಾರಕಕ್ಕೆ ಹೋಗಿದೆ.
ಮುಸ್ಲಿಂ ಸಮುದಾಯದವರು ಬಲವಂತವಾಗಿ ತಮ್ಮ ಸಮುದಾಯದವರನ್ನು ಮತಾಂತರ ಮಾಡುತ್ತಿದ್ದು ಬೌದ್ಧ ಪುರಾತತ್ತ್ವ ಶಾಸ್ತ್ರದ ಸ್ಥಳಗಳನ್ನು ನಾಶ ಮಾಡಿದ್ದಾರೆ ಎಂದು ಕೆಲ ಬೌದ್ಧ ಸಮುದಾಯದ ಗುಂಪುಗಳು ಆರೋಪಿಸಿದ್ದು ಘರ್ಷಣೆ ಹೆಚ್ಚಾಗಲು ಕಾರಣವಾಗಿದೆ.
ವಿಶೇಷ ಸಂಪುಟ ಸಭೆಯ ನಂತರ ರಾಷ್ಟ್ರದ ವಿವಿಧೆಡೆ ಗಲಭೆ ಹರಡುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರದಲ್ಲಿ 10 ದಿನಗಳ ಕಾಲ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ'ಎಂದು ಸರ್ಕಾದ ವಕ್ತಾರರಾದ ದಯಾಸಿರಿ ಜಯಶೇಖರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಭಾರತ-ಶ್ರೀಲಂಕಾ ಟಿ20 ಪಂದ್ಯಕ್ಕೆ ಬಿಗಿಭದ್ರತೆ
ಕೊಲಂಬೊದಲ್ಲಿ ಇಂದು ಭಾರತ - ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯ ನಡೆಯುತ್ತಿದ್ದು, ತುರ್ತುಪರಿಸ್ಥಿತಿ ಘೋಷಣೆಯ ಪರಿಣಾಮ ಕ್ರೀಡಾಂಗಣದ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿಭದ್ರತೆ ಆಯೋಜಿಸಲಾಗಿದೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ವಿರಾಟ್ ಕೊಹ್ಲಿ, ಧೋನಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ತಂಡ ರದ್ದಾಗುವ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.