
ಕೊಲಂಬೋ: ಶ್ರೀಲಂಕಾ ಸಂಸತ್ತನ್ನು ವಿಸರ್ಜಿಸಿ ಜ.5ರಂದು ಚುನಾವಣೆ ಹೇರಿದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ವಿವಾದಿತ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ ಬೆನ್ನಲ್ಲೇ, ಪ್ರಧಾನಿಯಾಗಿ ನಿಯೋಜನೆಗೊಂಡಿದ್ದ ಮಹಿಂದ ರಾಜಪಕ್ಸೆ ವಿರುದ್ಧ ಸಂಸತ್ತು ಬುಧವಾರ ಅವಿಶ್ವಾಸಗೊತ್ತುವಳಿಯೊಂದನ್ನು ಅಂಗೀಕರಿಸಿದೆ.
ಸುಪ್ರೀಂಕೋರ್ಟ್ ಆದೇಶದ ಮರುದಿನವೇ ಸಂಸತ್ ಕರೆಯಲಾಗಿತ್ತು. 225 ಸದಸ್ಯ ಬಲದ ಸಂಸತ್ತಿನಲ್ಲಿ ರಾಜಪಕ್ಸೆ ಬಹುಮತಕ್ಕೆ ಅಗತ್ಯವಿರುವ 113 ಸದಸ್ಯರ ಬೆಂಬಲ ಪಡೆಯಲು ವಿಫಲರಾದ ಹಿನ್ನೆಲೆಯಲ್ಲಿ ಅವಿಶ್ವಾಸಗೊತ್ತುವಳಿಗೆ ಗೆಲುವಾಗಿದೆ ಎಂದು ಸ್ಪೀಕರ್ ಕರು ಜಯಸೂರ್ಯ ಘೋಷಿಸಿದ್ದಾರೆ. ಹೀಗಾಗಿ ರಾಜಪಕ್ಸೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವುದು ಅನಿವಾರ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ