
ಕೊಲಂಬೋ: ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ವಿವಾದಾತ್ಮಕ ಸಂಸತ್ತು ವಿಸರ್ಜನೆ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.
ಸಿರಿಸೇನಾ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸಂಸತ್ತು ವಿಸರ್ಜನೆ ಆದೇಶಕ್ಕೆ ತಡೆ ಹೇರಿದ್ದಲ್ಲದೆ, ಜನವರಿ 5ರ ಮತದಾನಕ್ಕಾಗಿ ನಡೆಯುತ್ತಿದ್ದ ಸಿದ್ಧತೆಯನ್ನು ಸ್ಥಗಿತಗೊಳಿಸುವಂತೆ ಯೂ ಸೂಚಿಸಿತು.
ಅ.26ರಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರನ್ನು ಸಿರಿಸೇನಾ ಪದಚ್ಯುತಗೊಳಿಸಿದ್ದರು. ಆ ಸ್ಥಾನಕ್ಕೆ ಮಹಿಂದಾ ರಾಜಪಕ್ಸೆ ಅವರನ್ನು ನಿಯೋಜನೆಗೊಳಿಸಿ, ಬಹುಮತ ಸಾಬೀತಿಗೆ ಸೂಚಿಸಿದ್ದರು. ಬಹುಮತ ಸಾಬೀತು ಕಷ್ಟ ಎಂದು ಅರಿವಾಗುತ್ತಲೇ ಸಂಸತ್ತು ವಿಸರ್ಜನೆಗೊಳಿಸಿ, ಚುನಾವಣೆ ಘೋಷಣೆ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ