ಹಿಂದುತ್ವ ರಕ್ಷಣೆಗಾಗಿ ರಾಜಕೀಯಕ್ಕೆ ಪ್ರವೇಶಿಸುತ್ತೇನೆ; ಮುತಾಲಿಕ್

Published : Nov 19, 2017, 09:22 PM ISTUpdated : Apr 11, 2018, 12:49 PM IST
ಹಿಂದುತ್ವ ರಕ್ಷಣೆಗಾಗಿ ರಾಜಕೀಯಕ್ಕೆ ಪ್ರವೇಶಿಸುತ್ತೇನೆ; ಮುತಾಲಿಕ್

ಸಾರಾಂಶ

ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ದಿಸುವಂತೆ ಆಹ್ವಾನ ಬಂದಿದೆ. ಈ ಪೈಕಿ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದರು.

ಚಿಕ್ಕಮಗಳೂರು(ನ.19): ರಾಜ್ಯದಲ್ಲಿ ಹಿಂದುತ್ವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಹಿಂದುತ್ವದ ರಕ್ಷಣೆಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸಲಿದ್ದೇನೆ ಎಂದು ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಈಗಾಗಲೇ ಶಿವಸೇನೆಯೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದ್ದು, ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುತಾಲಿಕ್ ಹೇಳಿದ್ದಾರೆ. ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ದಿಸುವಂತೆ ಆಹ್ವಾನ ಬಂದಿದೆ. ಈ ಪೈಕಿ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದರು.

ಇದೇವೇಳೆ ಶ್ರೀ ರಾಮ ಸೇನೆ ಕಾರ್ಯಕರ್ತ ಶರಣಪ್ಪ ಹತ್ಯೆ ಬಗ್ಗೆ ಪ್ರಸ್ತಾಪಿಸಿದ ಮುತಾಲಿಕ್, ಸರ್ಕಾರದ ಕುಮ್ಮಕ್ಕಿನಿಂದಲೇ ಶ್ರೀ ರಾಮ ಸೇನೆಯ ಕಾರ್ಯಕರ್ತನ ಹತ್ಯೆ ನಡೆದಿದ್ದು, ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?