
ಮಂಡ್ಯ(ಜ.22): ಜಿಲ್ಲೆಯ ಶ್ರೀರಂಗಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀರಂಗನಾಥನ ಭಕ್ತರು ಆತಂಕಗೊಂಡಿದ್ದಾರೆ. ದೇವಾಲಯದ ಒಳಗಡೆ ಹೋಗಲು ಪೂಜೆ ಸಲ್ಲಿಸಲು ಕೂಡ ಭಯಪಡುವಂತಾಗಿದೆ. ಯಾಕಂದರೆ ಇತ್ತೀಚೆಗೆ ದೇವಾಲಯದ ಹೊರಗೋಡೆಯ ಒಂದೊಂದು ಭಾಗ ದಿನೇ ದಿನೇ ಕುಸಿಯುತ್ತಿದೆ. ಹೀಗೆ ದೇಗುಲ ಗೋಡೆ ಕುಸಿಯುತ್ತಿದ್ದು ಶ್ರೀರಂಗನ ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಏಕಾಏಕಿ ಶ್ರೀರಂಗನಾಥ ದೇವಾಲಯ ಗೋಡೆ ಕುಸಿಯಲು ದೇಗುಲದ ಹಿಂಭಾಗ ರೈಲ್ವೆ ಡಬ್ಲಿಂಗ್ ಟ್ರ್ಯಾಕ್ ನಿರ್ಮಾಣ ಹಾಗೂ ಮದ್ದಿನ ಮನೆಯ ನಿರ್ಮಾಣಕ್ಕಾಗಿ ನೆಲದಲ್ಲಿ ಡ್ರಿಲ್ಲಿಂಗ್ ಯಂತ್ರ ಬಳಸಿ ಕಾಮಗಾರಿ ಆರಂಭಿಸಿದ್ದಾರೆ. ಇದರ ಸದ್ದಿಗೆ ದೇವಾಲಯದ ಗೋಡೆ ಕುಸಿಯುತ್ತಿರಬಹುದೆಂದು ಸ್ಥಳೀಯರ ಆರೋಪವಾಗಿದೆ.
ರೈಲ್ವೆ ಡಬ್ಲಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯಿಂದ ಶ್ರೀರಂಗನಾಥನಿಗೆ ಕಂಟಕ ಬಂದೊದಗಿದೆ. ಈಗಾಗಲೇ ದೇವಾಲಯದ ಗೋಪುರ ಕಳಸ ಬಿದ್ದಿದೆ. ಜೊತೆಗೆ ದೇವಾಲಯದ ರಕ್ಷಣಾ ಗೋಡೆ ಕುಸಿಯುತ್ತಿರೋದು ಭಕ್ತರ ಆತಂಕಕ್ಕೆ ಕಾರಣವಾಗಿದೆ.
ಒಟ್ಟಿನಲ್ಲಿ ದೇವಾಲಯ ಕುಸಿತಕ್ಕೆ ರೈಲ್ವೆ ಡಬ್ಲಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಯೋ ಅಥವಾ ಇನ್ನಾವುದೋ ಕಾರಣ ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಪತ್ತೆ ಮಾಡಿ ಭಕ್ತರ ಆತಂಕವನ್ನು ದೂರ ಮಾಡಬೇಕಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.