
ಬೆಂಗಳೂರು(ಅ.21): ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ತಮ್ಮ ಶಾಸಕ ಸ್ಥಾನಕ್ಕೆ ಸಲ್ಲಿಸಿರುವ ರಾಜೀನಾಮೆಯನ್ನು ಸ್ಪೀಕರ್ ಕೆ ಬಿ ಕೋಳಿವಾಡ್ ಅಂಗೀಕರಿಸಿದ್ದಾರೆ. ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಕೊಟ್ಟಿರೋ ಕಾರಣಗಳನ್ನು ಕ್ರಾಸ್ ಚಕ್ ಮಾಡುವ ಅಧಿಕಾರ ಸಂವಿಧಾನದಲ್ಲಿದೆ. ಹಾಗಾಗಿ ಮೂರು ದಿನಗಳಿಂದ ರಾಜೀನಾಮೆ ಅಂಗೀಕರಿಸಿರಲಿಲ್ಲ. ಇಂದು ಮತ್ತೊಮ್ಮೆ ಶ್ರೀನಿವಾಸ್ ಪ್ರಸಾದರನ್ನು ಪೋನ್ ಮೂಲಕ ಸಂಪರ್ಕಿಸಲಾಯಿತು. ರಾಜೀನಾಮೆಗೆ ನೀಡಿರುವ ಕಾರಣಗಳ ಬಗ್ಗೆ ಅವರಿಂದ ದೃಡಿಕರಿಸಿಕೊಂಡ ಬಳಿಕ, ಸ್ಪಚ್ಛೆಯಿಂದ ಮತ್ತು ಯಾರ ಒತ್ತಡಕ್ಕೂ ರಾಜೀನಾಮೆ ನೀಡಿಲ್ಲ ಎನ್ನುವುದು ಖಚಿತವಾಗಿದೆ. ಹೀಗಾಗಿ ರಾಜೀನಾಮೆ ಅಂಗೀಕರಿಸುತ್ತಿರುವುದಾಗಿ ಸ್ಪೀಕರ್ ಕೋಳಿವಾಡ್ ತಿಳಿಸಿದ್ರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.