ಎಚ್‌​ಡಿಕೆ ಸರ್ಕಾರ ಹೆಚ್ಚು ದಿನ ಉಳಿ​ಯ​ಲ್ಲ: ಶ್ರೀರಾ​ಮು​ಲು

Published : May 29, 2018, 08:18 AM IST
ಎಚ್‌​ಡಿಕೆ ಸರ್ಕಾರ ಹೆಚ್ಚು ದಿನ ಉಳಿ​ಯ​ಲ್ಲ: ಶ್ರೀರಾ​ಮು​ಲು

ಸಾರಾಂಶ

ಜನಾಶೀರ್ವಾದವಿಲ್ಲದಿದ್ದರೂ ಅಧಿಕಾರಕ್ಕೇರಿರುವ ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರದಲ್ಲಿ ಈಗಾಗಲೇ ಸಚಿವ ಸ್ಥಾನಕ್ಕಾಗಿ ತಿಕ್ಕಾಟ ನಡೆದಿದ್ದು, ಈ ಸರ್ಕಾರ ಹೆಚ್ಚು ದಿನ ಉಳಿಯುವು​ದಿಲ್ಲ ಎಂದು ಶಾಸಕ ಬಿ. ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.  

ಕೊಪ್ಪಳ :  ಜನಾಶೀರ್ವಾದವಿಲ್ಲದಿದ್ದರೂ ಅಧಿಕಾರಕ್ಕೇರಿರುವ ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರದಲ್ಲಿ ಈಗಾಗಲೇ ಸಚಿವ ಸ್ಥಾನಕ್ಕಾಗಿ ತಿಕ್ಕಾಟ ನಡೆದಿದ್ದು, ಈ ಸರ್ಕಾರ ಹೆಚ್ಚು ದಿನ ಉಳಿಯುವು​ದಿಲ್ಲ ಎಂದು ಶಾಸಕ ಬಿ. ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನತೆ ಬಿಜೆಪಿಗೆ ಆಶೀರ್ವಾದ ನೀಡಿದ್ದಾರೆ. ಆದರೆ, ಕೇವಲ 38 ಸ್ಥಾನ ಗೆದ್ದಿರುವ ಜೆಡಿಎಸ್‌ ಪಕ್ಷವು ಕಾಂಗ್ರೆಸ್‌ ಜತೆಗೆ ಕೈ ಜೋಡಿಸಿ ಅಧಿಕಾರ ಹಿಡಿದಿದೆ. ಆದರೆ, ಇದು ಹೆಚ್ಚು ದಿನ ನಡೆ​ಯು​ವು​ದಿ​ಲ್ಲ. ರಾಜ್ಯದ ಜನತೆ ಬೇಸರಗೊಂಡಿದ್ದು, ಮತ್ತೆ ವಿಧಾನಸಭಾ ಚುನಾವಣೆ ನಡೆದರೂ ನಡೆಯಬಹುದು. ಒಂದು ವೇಳೆ ಚುನಾವಣೆ ನಡೆದರೆ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು, ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬರುವ ಮುನ್ನ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ತಿಳಿಸಿದ್ದರು. ಆದರೆ, ಮುಖ್ಯಮಂತ್ರಿಯಾದ ಬಳಿಕ ಸಾಲ ಮನ್ನಾದ ವಿಷಯದಲ್ಲಿ ಮಾತು ತಪ್ಪಿದ್ದಾರೆ. ಹೇಳಿಕೊಂಡಂತೆ ನಡೆದಿಲ್ಲ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಲ್ಲಿ ಇಂದು ಇನ್ನಷ್ಟು ಚಳಿ; ತಾಪಮಾನ ಕುಸಿತ, ಈ ಮೂರು ಜಿಲ್ಲೆಗಳಲ್ಲಿ ಶೀತ ಅಲೆ ಎಚ್ಚರಿಕೆ!
‘ಆತ್ಮನಿರ್ಭರ ಭಾರತ’ಕ್ಕೆ ಅಮೆಜಾನ್ ಪುಷ್ಟಿ