
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಮತ್ತೊಮ್ಮೆ ಶಾಲೆಯಲ್ಲಿ ಪ್ರವೇಶ ಪಡೆದು 10 ನೇ ತರಗತಿ ಪರೀಕ್ಷೆ ಬರೆಯಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಅವಕಾಶ ಕಲ್ಪಿಸಿದೆ. ಇದೇ ಮೊದಲ ಬಾರಿಗೆ ಶಿಕ್ಷಣ ಇಲಾಖೆಯು ಈ ರೀತಿಯ ಹೊಸ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.
ಇದರಿಂದ ವಿದ್ಯಾರ್ಥಿಗಳು ರೆಗ್ಯೂಲರ್ ವಿದ್ಯಾರ್ಥಿಗಳ ಜತೆಯಲ್ಲಿ ಕಲಿಯುವ ಶಾಲೆಗೆ ಹೋಗುವ ಜತೆಗೆ, ಮುಂದಿನ ವ್ಯಾಸಂಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಪ್ರಸಕ್ತ ಸಾಲಿನಲ್ಲಿ ಅನುತ್ತೀರ್ಣಗೊಂಡ ವಿಷಯಗಳು ಮತ್ತು ಹಳೆಯ ವಿದ್ಯಾರ್ಥಿ ಎಂಬುದಾಗಿ ಪರಿಗಣಿಸುವುದಿಲ್ಲ. ಹೊಸ ವಿದ್ಯಾರ್ಥಿ ಎಂಬುದಾಗಿಯೇ ಅಂಕಪಟ್ಟಿ ನೀಡಲಾಗುತ್ತದೆ.
ಈ ವಿದ್ಯಾರ್ಥಿಗಳು ಆರು ವಿಷಯಗಳಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ. ಹೊಸ ವಿದ್ಯಾರ್ಥಿಗಳಿಗೆ ಅನುಸರಿಸುವ ಎಲ್ಲ ಮಾನದಂಡಗಳನ್ನು ಅನುಸರಿಸಿ ಮರು ಪ್ರವೇಶ ದಾಖಲಾತಿ ನೀಡಲಾಗುತ್ತದೆ. ಎಂದಿನಂತೆ ಶಾಲೆಗಳಿಗೆ ಹೋಗಿ ಕಿರು ಪರೀಕ್ಷೆ ಎದುರಿಸಿ, ಆಂತರಿಕ ಅಂಕಗಳನ್ನು ಸಹ ಪಡೆಯಬೇಕಾಗುತ್ತದೆ.
(ಸಾಂದರ್ಭಿಕ ಚಿತ್ರ]
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.