
ಬೆಂಗಳೂರು: ಒಂದು ಕಾಲದಲ್ಲಿ ಚಿಂದಿ ಆಯುತ್ತಿದ್ದ ಹುಡುಗನೊಬ್ಬ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಮೂಲತಃ ಯಾದಗಿರಿ ಜಿಲ್ಲೆಯ ರಾಮಸಮುದ್ರನಾಗಿರುವ ಮನ್ಸು ಎಂಬ ವಿದ್ಯಾರ್ಥಿ ಶೇ.78 ಅಂಕ ಪಡೆದಿದ್ದಾನೆ. ಶಿವಾಜಿನಗರದ ಬಿಬಿಎಂಪಿ ಸರ್ಕಾರಿ ಶಾಲೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಅಂಕ ಪಡೆಯುವ ಮೂಲಕ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೂಡ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾನೆ.
ಯಾದಗಿರಿಯಿಂದ ಪೋಷಕರೊಂದಿಗೆ ವಲಸೆ ಬಂದ ಮನ್ಸು 2013 ರ ಸುಮಾರಿಗೆ ಚಿಂದಿ ಆಯುತ್ತಿದ್ದ. ಈ ಕೆಲಸದಲ್ಲಿ ನೋಡಿದ ಅವನನ್ನು ‘ಸ್ಪರ್ಶ ಟ್ರಸ್ಟ್’ ನೇರವಾಗಿ ಆರನೇ ತರಗತಿಗೆ ಸೇರಿಸುವ ಮೂಲಕ ಶಿಕ್ಷಣ ಕೊಡಿಸಿತು. ನಂತರ ಆಸಕ್ತಿಯಿಂದ ಓದಿದ ಮನ್ಸು, ಇಂದು ಉತ್ತಮ ಅಂಕ ಪಡೆದಿದ್ದಾನೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಟ್ರಸ್ಟ್ನ ಗೋಪಿನಾಥ್.
ಉತ್ತಮ ಅಂಕ ಪಡೆದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮನ್ಸು, ಲೆಕ್ಕ ಪರಿಶೋಧಕನಾಗುವ ಹಂಬಲ ಹೊಂದಿದ್ದೇನೆ. ಹೆಚ್ಚು ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ಶಿಕ್ಷಣ ಮುಂದುವರಿಸಲಿದ್ದೇನೆ. ಸ್ಪರ್ಶ ಸಂಸ್ಥೆಯು ಶಿಕ್ಷಣ ನೀಡಿಸಿದ್ದಕ್ಕೆ ಕೃತಜ್ಞತೆ ಅರ್ಪಿಸಿದ್ದಾನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.