
ಬೆಂಗಳೂರು(ಮೇ 12): ನಿನ್ನೆ ಪಿಯುಸಿ ಬಳಿಕ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇ. 67.87ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಇಂದು ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಘೋಷಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ.8ರಷ್ಟು ಕಡಿಮೆ ಫಲಿತಾಂಶ ಬಂದಿದೆ. ಈ ವರ್ಷ ಪರೀಕ್ಷೆ ಬರೆದ 8,56,286 ವಿದ್ಯಾರ್ಥಿಗಳ ಪೈಕಿ 5,81,199 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 2,75,087 ವಿದ್ಯಾರ್ಥಿಗಳು ಫೇಲ್ ಆಗಿದ್ಧಾರೆ..
ಪಿಯುಸಿ ಫಲಿತಾಂಶದಂತೆಯೇ ಎಸ್ಸೆಸ್ಸೆಲ್ಸಿಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮೊದಲೆರಡು ಸ್ಥಾನ ಕಾಯ್ದುಕೊಂಡಿವೆ. ಬೀದರ್ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ಶೇ.84.23 ಫಲಿತಾಂಶ ಪಡೆದರೆ, ದಕ್ಷಿಣ ಕನ್ನಡ ಶೇ. 82.39 ಪಡೆದಿದೆ. ಶೇ.62.20 ಫಲಿತಾಂಶ ಹೊಂದಿರುವ ಬೀದರ್ ಕಡೆಯ ಸ್ಥಾನದಲ್ಲಿದೆ. ಬೆಂಗಳೂರಿನ ವಿಷಯಕ್ಕೆ ಬಂದರೆ, ನಗರ ಪ್ರದೇಶದವರಿಗಿಂತ ಗ್ರಾಮಾಂತರದವರು ಮೇಲುಗೈ ಸಾಧಿಸಿದ್ದಾರೆ.
ಇಂದಿನಿಂದ ವೆಬ್'ಸೈಟ್'ನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ನಾಳೆ, ಆಯಾ ಶಾಲೆಗಳಲ್ಲಿ ಸಮಗ್ರ ಫಲಿತಾಂಶ ಲಭ್ಯವಿರಲಿದೆ. ಮರುಮೌಲ್ಯಮಾಪನ ಮತ್ತು ಮರು ಎಣಿಕೆ ನಡೆಸಲು ಮೇ 22 ಕೊನೆಯ ದಿನಾಂಕವಾಗಿದೆ.
ಫಲಿತಾಂಶ ವೀಕ್ಷಿಸಲು ಈ ಎರಡು ವೆಬ್'ಸೈಟ್'ಗಳಿಗೆ ಭೇಟಿ ನೀಡಬಹುದು. karresults.nic.in ಮತ್ತು sslc.kar.nic.in ಕ್ಲಿಕ್ ಮಾಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.