ಪರೀಕ್ಷಾ ಹಾಲ್‌ನಲ್ಲೇ ಮೂರ್ಛೆ: SSLC ವಿದ್ಯಾರ್ಥಿನಿ ಸಾವು

Published : Apr 03, 2019, 08:28 AM IST
ಪರೀಕ್ಷಾ ಹಾಲ್‌ನಲ್ಲೇ ಮೂರ್ಛೆ: SSLC ವಿದ್ಯಾರ್ಥಿನಿ ಸಾವು

ಸಾರಾಂಶ

ಪರೀಕ್ಷೆ ಬರೆಯುತ್ತಿದ್ದ ವೇಳೆ ಮೂರ್ಛೆ ಹೋದ ವಿದ್ಯಾರ್ಥಿನಿ| ಪರೀಕ್ಷಾ ಹಾಲ್‌ನಲ್ಲೇ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ಇಂಡಿ[ಏ.03]: ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆ ಬರೆಯುತ್ತಿದ್ದ ವೇಳೆ ಮೂರ್ಛೆ ಬಿದ್ದು, ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಧಾರುಣ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರ ಆದರ್ಶ ವಿದ್ಯಾಲಯದ ಪರೀಕ್ಷಾ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.

ಇಂಡಿಯ ಸಂಜೀವಿನಿ ರಾಮಜಿ ಜಾಧವ (16) ಮೃತ ವಿದ್ಯಾರ್ಥಿನಿ.

ಮಂಗಳವಾರ ವಿಜ್ಞಾನ ಪರೀಕ್ಷೆ ಬರೆಯಲು ಎಂದಿನಂತೆ ಸಂಜೀವಿನಿ ರಾಮಜಿ, ಆದರ್ಶ ವಿದ್ಯಾಲಯದ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಳು. 9.30ಕ್ಕೆ ಪರೀಕ್ಷೆ ಆರಂಭವಾಗಿದ್ದು, 10.30ರ ವೇಳೆ ಉತ್ತರ ಬರೆಯುವಾಗ ಡೆಸ್ಕ್‌ ಮೇಲೆಯೇ ಮೂರ್ಛೆ ಹೋಗಿದ್ದಾಳೆ.

ಪರೀಕ್ಷಾ ಕೇಂದ್ರದಲ್ಲಿಯೇ ಇದ್ದ ಬಿಇಒ ಎಸ್‌.ಬಿ.ಬಿಂಗೇರಿ ಕೂಡಲೇ ವಿದ್ಯಾರ್ಥಿನಿಯನ್ನು ತಮ್ಮ ವಾಹನದಲ್ಲಿಯೇ ಪರೀಕ್ಷಾ ಸಿಬ್ಬಂದಿಯೊಂದಿಗೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಅಸುನೀಗಿದ್ದಾಳೆ.

ಪೋಷಕರ ಆರೋಪ:

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಉಪಕರಣಗಳ ಕೊರತೆಯಿಂದ ವಿದ್ಯಾರ್ಥಿನಿಗೆ ಸರಿಯಾಗಿ ಚಿಕಿತ್ಸೆ ನೀಡಲು ವೈದ್ಯರಿಂದ ಸಾಧ್ಯವಾಗಿಲ್ಲ. ವಿಜಯಪುರಕ್ಕೆ ರವಾನಿಸಲು ಇಂಡಿ ಸರ್ಕಾರಿ ಆಸ್ಪತ್ರೆಯಿಂದ ಸೂಕ್ತ ಸಮಯಕ್ಕೆ ವ್ಯವಸ್ಥೆ ಮಾಡಲಿಲ್ಲ, ಒಂದು ಗಂಟೆಗಳ ಕಾಲ ಸತಾಯಿಸಿದರು ಎಂದು ಮೃತ ವಿದ್ಯಾರ್ಥಿನಿಯ ಪಾಲಕರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ