
ಹುಬ್ಬಳ್ಳಿ(ಮಾ.23): ಶಿಕ್ಷಣ ಇಲಾಖೆಯ ಮಹಾ ಯಡವಟ್ಟಿನಿಂದ ಎಸ್ಎಸ್ಎಲ್ಸಿ ವಿಧ್ಯಾರ್ಥಿಗಳು ಎರಡೆರಡೂ ಬಾರಿ ಪರೀಕ್ಷೆ ಬರೆದು ತೊಂದರೆ ಅನುಭವಿಸಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳದ ಶಿವಾನಂದ ಮಠ ಶಾಲೆಯಲ್ಲಿ ನಡೆದಿದೆ.
ರೆಗ್ಯೂಲರ್ ವಿಧ್ಯಾರ್ಥಿಗಳಿಗೆ, ಎಕ್ಸಟ್ರ್ನಲ್ ಪ್ರಶ್ನಾ ಪತ್ರಿಕೆ ವಿತರಿಸಲಾಗಿದೆ. ವಿಧ್ಯಾರ್ಥಿಗಳು ಎಚ್ಚೆತ್ತು ಶಿಕ್ಷಕರಿಗೆ ಮನವಿ ಮಾಡಿಕೊಂಡರೂ ಇಲಾಖೆ ಅದೇ ಪ್ರಶ್ನೆ ಪತ್ರಿಕೆಯಿಂದ ಪರೀಕ್ಷೆ ಬರೆಸಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಮತ್ತೊಂದು ಬಾರಿ ಸಿಬ್ಬಂದಿ ಪರೀಕ್ಷೆ ಬರೆಸಿದ್ದಾರೆ. ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆಯಿತ್ತು. ಎರಡು ಬಾರಿ ಪರೀಕ್ಷೆ ಬರೆಸಿದ ಕಾರಣ ಪಾಲಕರು ಸಿಬ್ಬಂದಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಇಷ್ಟೆಲ್ಲಾ ನಡೆದರೂ ಶಿಕ್ಷಣ ಇಲಾಖೆ ಸುಮ್ಮನೆ ಕುಳಿತಿರುವುದು ಪಾಲಕರ ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.